ಮಕ್ಕಳಿಂದ ಶೌಚಾಲಯ ಗುಂಡಿ ಸ್ವಚ್ಛತೆ: ತಪ್ಪಿತಸ್ಥರು ಯಾರೇ ಇದ್ದರೂ ಕ್ರಮ ಎಂದ ಸಿಎಂ ಸಿದ್ದರಾಮಯ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಶಾಲೆಯ ವಸತಿ ಶಾಲೆಯ ಮಕ್ಕಳಿಂದ ಶೌಚಾಲಯ ಗುಂಡಿಯನ್ನು ಸ್ವಚ್ಛಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿ ದ್ದು, ತಪ್ಪಿತಸ್ಥರು ಯಾರೇ ಇದ್ದರೂ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.

ಕೋಲಾರ ಜಿಲ್ಲೆಯಲ್ಲಿ ಮಾಲೂರು ತಾಲೂಕಿನ ಯಲವಳ್ಳಿ ಗ್ರಾಮದ ಮೊರಾರ್ಜಿ ದೇಸಾಯಿ ಶಾಲೆಯ ವಸತಿ ಶಾಲೆಯ ಮಕ್ಕಳಿಂದ ಶೌಚಾಲಯ ಗುಂಡಿಯನ್ನು ಸ್ವಚ್ಛಗೊಳಿಸಿದ್ದರು.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆ ವಿಚಾರ ನನ್ನ ಗಮನಕ್ಕೆ ಬಂದಿದೆ.ವರದಿಯನ್ನು ತರಿಸಿಕೊಳ್ಳುತ್ತೇನೆ ಎಂದು ಹೇಳಿದರು.

ಯಾರೇ ತಪ್ಪು ಮಾಡಿದರೂ ಕ್ರಮ ಕೈಗೊಳ್ಳುತ್ತೇವೆ.ನಿನ್ನೆ ಆರೋಗ್ಯ ಇಲಾಖೆಯ ಸಚಿವರ ಜೊತೆ ನಾನು ಮಾತನಾಡಿದ್ದೇನೆ.ತಜ್ಞರ ಜೊತೆ ಸಭೆ ಮಾಡಲು ಸೂಚಿಸಿದ್ದೇನೆ ಎಂದು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!