ಮತ್ತೆ ಗೆಲುವಿನ ನಿರೀಕ್ಷೆಯಲ್ಲಿ ಚೆನ್ನೈ: ಟಾಸ್​ ಗೆದ್ದ ಬೆಂಗಳೂರು ಬೌಲಿಂಗ್

ಹೊಸ ದಿಗಂತ ಡಿಜಿಟಲ್ ಡೆಸ್ಕ್

ಸತತ ಸೋಲುಗಳಿಂದ ಮಂಕಾಗಿರುವ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಟಾಸ್​ ಗೆದ್ದ ಬೆಂಗಳೂರು ತಂಡ ​ ಬೌಲಿಂಗ್ ಮಾಡುವುದಕ್ಕೆ ನಿರ್ಧರಿಸಿದೆ .
ಕುಟುಂಬಸ್ಥರ ಸಾವಿನ ಕಾರಣ ಬಯೋಬಬಲ್ ತೊರೆದಿರುವ ಹರ್ಷಲ್ ಪಟೇಲ್ ಇಂದಿನ ಪಂದ್ಯದಲ್ಲಿ ಕಣಕ್ಕಿಳಿಯುತ್ತಿಲ್ಲ. ಅವರ ಬದಲಾಗಿ ಸೂಯಸ್ ಪ್ರಭುದೇಸಾಯಿ ಅವಕಾಶ ಪಡೆದಿದ್ದಾರೆ.ಮತ್ತೊಂದು ಕಡೆ ಚೆನ್ನೈ ತಂಡ ಯಾವುದೇ ಬದಲಾವಣೆಯಿಲ್ಲದೆ ಕಣಕ್ಕಿಳಿಯುತ್ತಿದೆ.
ಆರ್​ಸಿಬಿ ಮೊದಲ ಪಂದ್ಯ ಸೋತ ಬಳಿಕ ಸತತ 3 ಜಯ ಸಾಧಿಸಿದೆ.
ಇತ್ತ ಲಖನೌ ಸೂಪರ್ ಜೈಂಟ್ಸ್ ವಿರುದ್ಧ 200ರ ಗಡಿ ದಾಟಿದ್ದನ್ನು ಹೊರೆತುಪಡಿಸಿದರೆ, ಉಳಿದ ಪಂದ್ಯಗಳಲ್ಲಿ ಹೇಳಿಕೊಳ್ಳುವಂತಹ ಪ್ರದರ್ಶನ ತೋರಿಲ್ಲ.
ರಾಯಲ್ ಚಾಲೆಂಜರ್ಸ್ ಬೆಂಗಳೂರು (ಪ್ಲೇಯಿಂಗ್ XI): ಫಾಫ್ ಡು ಪ್ಲೆಸಿಸ್ (ನಾಯಕ), ಅನುಜ್ ರಾವತ್, ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ದಿನೇಶ್ ಕಾರ್ತಿಕ್ (ವಿಕೀ), ಶಹಬಾಜ್ ಅಹ್ಮದ್, ವನಿಂದು ಹಸರಂಗ, ಜೋಶ್ ಹ್ಯಾಜಲ್‌ವುಡ್, ಮೊಹಮ್ಮದ್ ಸಿರಾಜ್, ಸುಯಶ್ ಪ್ರಭುದೇಸಾಯಿ, ಆಕಾಶ್ ದೀಪ್
ಚೆನ್ನೈ ಸೂಪರ್ ಕಿಂಗ್ಸ್ (ಪ್ಲೇಯಿಂಗ್ XI): ರಾಬಿನ್ ಉತ್ತಪ್ಪ, ರುತುರಾಜ್ ಗಾಯಕ್ವಾಡ್, ಮೊಯಿನ್ ಅಲಿ, ಅಂಬಟಿ ರಾಯುಡು, ಶಿವಂ ದುಬೆ, ರವೀಂದ್ರ ಜಡೇಜಾ (ನಾಯಕ), ಎಂಎಸ್ ಧೋನಿ (ವಿಕೀ), ಡ್ವೇನ್ ಬ್ರಾವೋ, ಕ್ರಿಸ್ ಜೋರ್ಡಾನ್, ಮಹೇಶ್ ತೀಕ್ಷಣ, ಮುಖೇಶ್ ಚೌಧರಿ

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!