ಮಾಯಾ ನಗರಿಯಲ್ಲಿ ವರುಣನ ಆರ್ಭಟ: ಭೂಕುಸಿತಕ್ಕೆ ಮಣ್ಣಿನಡಿ ಸಿಲುಕಿದ 6 ಜನರು!

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಮಾಯಾ ನಗರಿಯಲ್ಲಿ ವರುಣನ ಆರ್ಭಟ ಮುಂದುವರಿದ್ದು, ಪಾಲ್ಘರ್​ ಜಿಲ್ಲೆಯ ವಸಯಿ ಪಟ್ಟಣದಲ್ಲಿ ಗುಡ್ಡ ಕುಸಿದು ಮನೆಗಳ ಬಿದ್ದ ಕಾರಣ 6 ಜನರು ಮಣ್ಣಿನಡಿ ಸಿಲುಕಿದ್ದಾರೆ. ಇದರಲ್ಲಿ 4 ಮಂದಿಯನ್ನು ರಕ್ಷಿಸಲಾಗಿದ್ದು, ಉಳಿದವರ ರಕ್ಷಣೆಗಾಗಿ ಕಾರ್ಯಾಚರಣೆ ನಡೆಸಲಾಗುತ್ತಿದೆ.
ಗುಡ್ಡದ ಕೆಳಗೆ ಇರುವ ಮನೆಗಳ ಮೇಲೆ ಮಣ್ಣು ಬಿದ್ದಿದೆ. ಇದರಿಂದ 2 ಕುಟುಂಬದ 6 ಮಂದಿ ಒಳಗೆ ಸಿಲುಕಿದ್ದರು. ತ ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಮಣ್ಣಿನಡಿ ಸಿಲುಕಿದ್ದ 6 ಮಂದಿಯ ಪೈಕಿ ನಾಲ್ವರನ್ನು ರಕ್ಷಿಸಿದ್ದಾರೆ. ಇನ್ನಿಬ್ಬರು ಒಳಗಡೆಯೇ ಸಿಲುಕಿದ್ದು, ಅವರ ರಕ್ಷಣೆಗೆ ಭರದ ಕಾರ್ಯಾಚರಣೆ ನಡೆಸಲಾಗುತ್ತಿದೆ.
ರಾಜೀವ್ಲಿ ವಘರಾಲ್ ಪ್ರದೇಶದಲ್ಲಿ ಭೂ ಮಾಫಿಯಾ ಜೋರಾಗಿದೆ.ಇದರಿಂದ ಬೃಹತ್ ಗುಡ್ಡಗಳನ್ನು ಕೊರೆದು ಮಣ್ಣನ್ನು ಸಾಗಿಸಲಾಗುತ್ತಿದೆ. ಈ ಪ್ರದೇಶದಲ್ಲಿ ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಗುಡ್ಡ ಕುಸಿತ ಉಂಟಾಗಿದೆ ಎನ್ನಲಾಗುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!