ಹೊಸದಿಗಂತ ವರದಿ, ಕಲಬುರಗಿ
ಕಲಬುರಗಿ ಹೊರವಲಯದ ಕಡಗಂಚಿ ಬಳಿಯಿರುವ ಕರ್ನಾಟಕ ಕೇಂದ್ರಿಯ ವಿಶ್ವವಿದ್ಯಾಲಯದ ಆವರಣದಲ್ಲಿ ರಾಮ ನವಮಿ ಆಚರಿಸುತ್ತಿದ್ದ ಎಬಿವಿಪಿ ವಿದ್ಯಾರ್ಥಿಗಳ ಮೇಲೆ ವಿವಿಯ ಕೆಲ ವಿದ್ಯಾರ್ಥಿಗಳು ಹಲ್ಲೆ ನಡೆಸಿರುವ ಘಟನೆ ಭಾನುವಾರ ನಡೆದಿದೆ.
ಎಬಿವಿಪಿ ಸಂಗಟನೆಗೆ ಸೇರಿದ ವಿದ್ಯಾರ್ಥಿಗಳಾದ ವಿಶ್ವನಾಥ್ ಮತ್ತು ನರೇಂದ್ರ ಎಂಬುವ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆದಿದೆ. ರಾಮನವಮಿ ಸಂಭ್ರಮಾಚರಣೆ ವಿಚಾರವಾಗಿ ಮಾತಿನ ಚಕಮಕಿ ನಡೆದು ವಿವಿಯ ಕೆಲ ವಿದ್ಯಾರ್ಥಿಗಳಿಂದಲೇ ಎಬಿವಿಪಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡಲಾಗಿದೆ.
ಗಾಯಾಳು ವಿದ್ಯಾರ್ಥಿಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ನರೋಣಾ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ. ಘಟನೆ ಖಂಡಿಸಿ ಎಬಿವಿಪಿ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ