July 28, 2026
Tuesday, July 28, 2026
spot_img

ಸದನದ ಗೌರವ ಕಾಪಾಡಲು ಸ್ಪೀಕರ್ ವಿರುದ್ಧ ಅವಿಶ್ವಾಸ ನಿರ್ಣಯ: ಗೌರವ್ ಗೊಗೊಯ್

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರನ್ನು ಪದಚ್ಯುತಗೊಳಿಸುವಂತೆ ವಿರೋಧ ಪಕ್ಷಗಳು ನಿರ್ಣಯ ಮಂಡಿಸಿದ್ದು, ಇದು ಸಂವಿಧಾನವನ್ನು ಉಳಿಸಲು ಮತ್ತು ಸದನದ ಗೌರವ ಕಾಪಾಡಲು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಂಗಳವಾರ ಹೇಳಿದ್ದಾರೆ.

ಲೋಕಸಭೆಯಲ್ಲಿ ಸ್ಪೀಕರ್ ವಿರುದ್ಧದ ಅವಿಶ್ವಾಸ ನಿರ್ಣಯದ ಮೇಲಿನ ಚರ್ಚೆ ಆರಂಭಿಸಿ ಮಾತನಾಡಿದ ಗೊಗೊಯ್, ಕಳೆದ ಫೆಬ್ರವರಿಯಲ್ಲಿ ರಾಷ್ಟ್ರಪತಿಗಳ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಯ ಸಮಯದಲ್ಲಿ ಪ್ರತಿಪಕ್ಷಗಳ ಸದಸ್ಯರಿಗೆ ಮಾತನಾಡಲು ಅವಕಾಶ ನೀಡಲಿಲ್ಲ ಎಂದರು.

ರಾಹುಲ್ ಗಾಂಧಿಗೂ ಮಾತನಾಡಲು ಅವಕಾಶ ನೀಡಲಿಲ್ಲ. ಸದನ ಮತ್ತು ದೇಶದ ಜನರಿಗೆ ತಿಳಿದಿರಬೇಕಾದ ಕೆಲವು ನಿರ್ಣಾಯಕ ವಿಷಯಗಳನ್ನು ಕಡ್ಡಾಯವಾಗಿ ಮಂಡಿಸಲು ಪ್ರಯತ್ನಿಸುವಾಗ ಎಲ್‌ಒಪಿಗೆ ಪದೇ ಪದೇ ಅಡ್ಡಿಪಡಿಸಲಾಯಿತು ಎಂದು ಗೊಗೊಯ್ ಹೇಳಿದರು.

ಕಳೆದ ಫೆಬ್ರವರಿಯಲ್ಲಿ ರಾಹುಲ್ ಗಾಂಧಿಯವರು ಅಮೆರಿಕದಲ್ಲಿ ಉದ್ಯಮಿಯೊಬ್ಬರ ವಿರುದ್ಧ ನಡೆಯುತ್ತಿರುವ ತನಿಖೆಯ ವಿಷಯವನ್ನು ಪ್ರಸ್ತಾಪಿಸಲು ಬಯಸಿದ್ದರು. ಈ ತನಿಖೆಯಲ್ಲಿ ಭಾರತದ ಸಚಿವರೊಬ್ಬರ ಹೆಸರನ್ನು ಸಹ ಉಲ್ಲೇಖಿಸಲಾಗಿದೆ, ಆದರೆ ಆ ವಿಷಯದ ಬಗ್ಗೆ ಮಾತನಾಡಲು ಅವರಿಗೆ ಅವಕಾಶ ನೀಡಲಿಲ್ಲ ಎಂದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !