ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರದಿಂದ ರಾಜ್ಯಕ್ಕೆ ₹ 5,500 ಕೋಟಿ ತಕ್ಷಣ ಬರಬೇಕು. ರಾಜ್ಯ ಮತ್ತು ಕೇಂದ್ರದ ನಡುವೆ ಇರುವ ಸಂಬಂಧದ ನಿಯಮಗಳನ್ನು ಆಧರಿಸಿ ಒತ್ತಾಯ ಮಾಡಬೇಕಾಗುತ್ತದೆ ಎಂದು ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಕ್ಕೆ ಬರಬೇಕಾದ ಅನುದಾನ ಬಿಡುಗಡೆ ಮಾಡುವಂತೆ ಎರಡು ವರ್ಷದಿಂದ ಕೇಂದ್ರ ಸರ್ಕಾರಕ್ಕೆ ಕೇಳುತ್ತಿದ್ದೇವೆ. ಅನೇಕ ಕಾರಣಗಳಿಂದ ನಿಧಾನವಾಗುತ್ತಿದೆ. ಕೆಲವು ಸಂದರ್ಭದಲ್ಲಿ ಬರುವುದಿಲ್ಲ. ಈ ಬಗ್ಗೆ ಮುಖ್ಯಮಂತ್ರಿ ಸಭೆ ನಡೆಸಿದ್ದಾರೆ ಎಂದರು.
ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿ ಹಣ ಬಿಡುಗಡೆ ಮಾಡಿಸುವಂತೆ ರಾಜ್ಯದ ಸಂಸದರಿಗೆ ಮುಖ್ಯಮಂತ್ರಿ ಮನವಿ ಮಾಡಿದ್ದಾರೆ. ನಮಗೆ ಬರಬೇಕಾದ ಅನುದಾನ ಮಂಜೂರು ಮಾಡಿದರೆ, ನಾವೇಕೆ ಒತ್ತಾಯಿಸುತ್ತೇವೆ ಎಂದು ಪ್ರಶ್ನೆ ಹಾಕಿದರು.