ಕಲಾವಿದರ ಸಂಘವೊಂದರ ಕಟ್ಟಡ ನಿರ್ಮಾಣಕ್ಕೆ 1 ಕೋಟಿ ರೂ. ದೇಣಿಗೆ ನೀಡಿದ ನಟ ವಿಜಯ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ತಮಿಳು ಚಿತ್ರರಂಗದ ನಟ ದಳಪತಿ ವಿಜಯ್ ಅವರು ಹೊಸ ರಾಜಕೀಯ ಪಕ್ಷವನ್ನು ಆರಂಭಿಸಿದ್ದಾರೆ. ಪಕ್ಷದ ಹೆಸರನ್ನು ತಮಿಳ ವೆಟ್ರಿ ಕಳಗಂ ಎಂದು ಈಗಾಗಲೇ ಘೋಷಿಸಿದ್ದಾರೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ವಿಜಯ್ ತಮ್ಮ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದ್ದಾರೆ.

ಇದೀಗ ತಮಿಳುನಾಡಿನ ಕಲಾವಿದರ ಸಂಘ ಕಟ್ಟಡವೊಂದು ನಿರ್ಮಿಸುತ್ತಿದೆ. ಈ ಕಟ್ಟಡ ನಿರ್ಮಾಣಕ್ಕೆ ಒಂದು ಕೋಟಿ ರೂ. ದೇಣಿಗೆಯನ್ನು ನಟ ವಿಜಯ್ ನೀಡಿದ್ದಾರೆ.

ಈ ಸುದ್ದಿಯನ್ನು ಸಂಘದ ಅಧ್ಯಕ್ಷರಾಗಿರುವ ನಟ, ನಿರ್ಮಾಪಕ ವಿಶಾಲ್ ಹಂಚಿಕೊಂಡಿದ್ದಾರೆ. ದಳಪತಿ ವಿಜಯ್ ಅವರ ಕೊಡುಗೆಗೆ ಧನ್ಯವಾದ ದೇವರು ನಿಮಗೆ ಒಳ್ಳೆಯದನ್ನು ಮಾಡಲಿ ಎಂದು ತಮ್ಮ ಎಕ್ಸ್ ಮಾದ್ಯಮದಲ್ಲಿ ಪೋಸ್ಟ್ ಮೂಲಕ ಹಂಚಿಕೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!