Saturday, September 13, 2025

ಹಾಸನ ದುರಂತದಲ್ಲಿ ಮೃತಪಟ್ಟವರಿಗೆ 1 ಲಕ್ಷ ಪರಿಹಾರ: ಹೆಚ್.ಡಿ ದೇವೇಗೌಡ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹಾಸನದಲ್ಲಿ ಗಣೇಶ ಮೆರವಣಿಗೆ ವೇಳೆಯಲ್ಲಿ ಸಾವನ್ನಪ್ಪಿದವರ ಕುಟುಂಬಸ್ಥರಿಗೆ ಜೆಡಿಎಸ್ ಕೂಡ ಪರಿಹಾರ ಘೋಷಿಸಿದೆ

ಬೆಂಗಳೂರಲ್ಲಿ ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡ ಮಾತನಾಡಿ, ಹಾಸನದ ಮೊಸಳೆಹೊಸಳ್ಳಿಯಲ್ಲಿ ಟ್ರಕ್ ಹರಿದು 9 ಮಂದಿ ಸಾವನ್ನಪ್ಪಿದ್ದಾರೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ. ಕುಟುಂಬಸ್ಥರಿಗೆ ಈ ದುಃಖ ಭರಿಸುವಂತ ಶಕ್ತಿ ನೀಡಲಿದೆ ಎಂದರು.

ಹಾಸನ ಗಣೇಶ ಮೆರವಣಿಗೆ ದರಂತದಲ್ಲಿ ಮೃತರಾದಂತ ಕುಟುಂಬಸ್ಥರಿಗೆ ಜೆಡಿಎಸ್ ಪಕ್ಷದಿಂದಲೂ ಪರಿಹಾರ ನೀಡಲಾಗುತ್ತದೆ. ಮೃತರಿಗೆ ತಲಾ 1 ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಿದರು. ಅಲ್ಲದೇ ಗಂಭೀರವಾಗಿ ಗಾಯಗೊಂಡಿರುವವರಿಗೆ ತಲಾ 25 ಸಾವಿರ ಪರಿಹಾರ ನೀಡುವುದಾಗಿ ತಿಳಿಸಿದರು. ಜೊತೆಗೆ ಸ್ವಲ್ಪ ಪ್ರಮಾಣದಲ್ಲಿ ಗಾಯಗೊಂಡವರಿಗೆ ತಲಾ 20 ಸಾವಿರ ಪರಿಹಾರ ನೀಡಲಾಗುತ್ತದೆ ಎಂದರು.

ಇದನ್ನೂ ಓದಿ