ಒಡಿಶಾದ ರೈಲು ದುರಂತದ ಸಂತ್ರಸ್ತರಿಗೆ 1 ಲಕ್ಷ ರೂ. ನೀಡಿದ ಕ್ರಿಕೆಟರ್ ಚಹಾಲ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಒಡಿಶಾದ ರೈಲು ದುರಂತದ ಸಂತ್ರಸ್ತರಿಗೆ ಟೀಮ್ ಇಂಡಿಯಾ ಆಟಗಾರ ಯುಜ್ವೇಂದ್ರ ಚಹಾಲ್ ಒಂದು ಲಕ್ಷ ರೂ. ದೇಣಿಗೆ ನೀಡಿದ್ದಾರೆ.

ಇತ್ತೀಚೆಗೆ ಯೂಟ್ಯೂಬ್‌ ಲೈವ್ ಸ್ಟ್ರೀಮ್ ಮೂಲಕ ಪ್ರಸಿದ್ಧ ಆನ್​ಲೈನ್ ಗೇಮಿಂಗ್ ತಂಡ S8ulesports ಒಡಿಶಾ ರೈಲು ಅಪಘಾತದ ಸಂತ್ರಸ್ತರಿಗಾಗಿ ದೇಣಿಗೆ ಸಂಗ್ರಹಿಸಿದ್ದರು. ಈ ವೇಳೆ ಲೈವ್​ ಬಂದಿದ್ದ ಯುಜ್ವೇಂದ್ರ ಚಹಾಲ್ 1 ಲಕ್ಷ ರೂ. ದೇಣಿಗೆ ನೀಡಿದರು.
ಚಹಾಲ್ ಅವರ ಈ ನಡೆಗೆ S8UL ತಂಡದ ಸದಸ್ಯರು ಕೃತಜ್ಞತೆಯನ್ನು ವ್ಯಕ್ತಪಡಿಸಿದ್ದಾರೆ.

ಇದಕ್ಕೂ ಮುನ್ನ ಟೀಮ್ ಇಂಡಿಯಾದ ಮಾಜಿ ಆಟಗಾರ ವೀರೇಂದ್ರ ಸೆಹ್ವಾಗ್, ರೈಲು ದುರಂತರದಲ್ಲಿ ಮೃತಪಟ್ಟವರ ಮಕ್ಕಳ ಶಿಕ್ಷಣದ ಜವಾಬ್ದಾರಿಯನ್ನು ವಹಿಸಿಕೊಳ್ಳುವುದಾಗಿ ತಿಳಿಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!