10 ದಿನಗಳ ವಿಧಾನಮಂಡಲ ಅಧಿವೇಶನ ಮುಕ್ತಾಯ: ರಮೇಶ್ ಜಾರಕಿಹೊಳಿ, ಈಶ್ವರಪ್ಪ ಗೈರು

ಹೊಸದಿಗಂತ ಡಿಜಿಟಲ್ ಡೆಸ್ಕ್:

10 ದಿನಗಳ ವಿಧಾನಮಂಡಲ ಅಧಿವೇಶನ ಮುಕ್ತಾಯಗೊಂಡಿದ್ದು, ಶೇಕಡಾ 90ರಷ್ಟು ಹಾಜರಾತಿ ಇತ್ತು ಎಂದು ವಿಧಾನಸೌಧದಲ್ಲಿ ಸ್ಪೀಕರ್​ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದಾರೆ.

ಈ ಬಗ್ಗೆ ಸ್ಪೀಕರ್​ ವಿಶ್ವೇಶ್ವರ ಹೆಗಡೆ ಕಾಗೇರಿ ಮಾತನಾಡಿ , ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ, ಮಾಜಿ ಸಚಿವ ಕೆ. ಎಸ್​ ಈಶ್ವರಪ್ಪ ಗೈರಾಗಿದ್ದು, ಅಧಿವೇಶನಕ್ಕೆ ಗೈರುಹಾಜರಾಗಿದ್ದ ಬಗ್ಗೆ ನನಗೆ ಮಾಹಿತಿ ನೀಡಿಲ್ಲ ಮತ್ತು ನನ್ನ ಅನುಮತಿ ಪಡೆದಿಲ್ಲ.

ವಿಧಾನಸಭೆಯಲ್ಲಿ 16 ವಿಧೇಯಗಳ ಮಂಡನೆಯಾಗಿ ಅಂಗೀಕಾರವಾಗಿವೆ. ವಿಧಾನಪರಿಷತ್​ನಲ್ಲಿ 14 ವಿಧೇಯಕ ಮಂಡನೆಯಾಗಿ, ಅಂಗೀಕಾರಗೊಂಡಿವೆ. ಇನ್ನೂ 2 ವಿಧೇಯಕಗಳ ಬಗ್ಗೆ ಚರ್ಚೆ ಆಗಬೇಕಿದೆ. ಒಂದು ವಿಧೇಯಕವನ್ನು ವಾಪಸ್ ಪಡೆಯಲಾಗಿದೆ ಎಂದು ಹೇಳಿದ್ದಾರೆ.

ನಿಯಮ 60ರಲ್ಲಿ ಸೂಚಿಸಿದ್ದ ವಿಷಯಗಳನ್ನು 69ರಡಿ ಚರ್ಚೆ ಮಾಡಲಾಗಿದೆ. 150 ಪ್ರಶ್ನೆಗಳಿಗೆ ಲಿಖಿತ ಮೂಲಕ ಉತ್ತರ ಕೊಡಲಾಗಿದೆ. ಗಮನ ಸೆಳೆಯುವ ಸೂಚನೆಯಡಿ 857 ಪ್ರಶ್ನೆಗಳು ಬಂದಿದ್ದು, 177 ಪ್ರಶ್ನೆಗಳಿಗೆ ಉತ್ತರ ಕೊಡಲಾಗಿದೆ. ಅತ್ಯುತ್ತಮ ಶಾಸಕ ಆಯ್ಕೆಗೆ ಸಮಿತಿ ಸಭೆ ಮಾಡಲಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಪಕ್ಷ ನಾಯಕರು, ಕಾನೂನು ಸಚಿವರು ಸಭೆ ಮಾಡಿದ್ದಾರೆ ಎಂದು ತಿಳಿಸಿದರು.

ಅತ್ಯುತ್ತಮ ಶಾಸಕ ಎಂದು ಹಲವು ಶಾಸಕರ ಹೆಸರು ಬಂದಿದ್ದು, ಬೆಳಗಾವಿ ಅಧಿವೇಶನದಲ್ಲಿ ಸನ್ಮಾನ ಮಾಡಲಾಗುತ್ತದೆ. ಬೆಳಗಾವಿಯಲ್ಲಿ ಅಧಿವೇಶನ ನಡೆಸುವ ಬಗ್ಗೆ ಸಂಪುಟಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಈ ಬಾರಿ ಅಧಿವೇಶನದಲ್ಲಿ ಅತಿವೃಷ್ಟಿಗೆ ಕುರಿತು ಚರ್ಚಿಸಲಾದ ವಿಷಯ ಫಲಪ್ರದವಾಗಿದೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!