ಭಾರೀ ಮಳೆಗೆ ಮೃತಪಟ್ಟವರ ಕುಟುಂಬಗಳಿಗೆ 10 ಲಕ್ಷ ರೂ. ಪರಿಹಾರ ಘೋಷಿಸಿದ ದೆಹಲಿ ಸರ್ಕಾರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಷ್ಟ್ರ ರಾಜಧಾನಿಯಲ್ಲಿ ಸುರಿದ ಭಾರೀ ಮಳೆಯಿಂದಾಗಿ ಮೃತಪಟ್ಟವರ ಕುಟುಂಬಗಳಿಗೆ 10 ಲಕ್ಷ ರೂ. ಪರಿಹಾರವನ್ನು ದೆಹಲಿ ಸರ್ಕಾರವು ಭಾನುವಾರ ಘೋಷಿಸಿದೆ.

ಕಂದಾಯ ಇಲಾಖೆಗೆ ಅಧಿಕೃತ ಸಂವಹನದಲ್ಲಿ ದೆಹಲಿ ಹಣಕಾಸು ಸಚಿವ ಅತಿಶಿ , ಜೂನ್ 28 ರಂದು ಸುರಿದ ವಿಪರೀತ ಮಳೆಗೆ ಸಾವು-ನೋವುಗಳು ಸಂಭವಿಸಿದೆ. ಹೀಗಾಗಿ ಭಾರೀ ಮಳೆಗೆ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ 10 ಲಕ್ಷ ರೂ. ಪರಿಹಾರವನ್ನು ನೀಡುವಂತೆ ನಿರ್ದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.

ಈ ಸಂಬಂಧ ಅತಿಶಿ ತಮ್ಮ ಎಕ್ಸ್‌ ಖಾತೆಯಲ್ಲಿ, ಜೂನ್ 28 ರಂದು ಹಲವು ಮಂದಿ ಸಾವನ್ನಪ್ಪಿರುವ ಬಗ್ಗೆ ವರದಿಯಾಗಿವೆ. 24 ಗಂಟೆಗಳಲ್ಲಿ 228 ಮಿ.ಮೀ ತೀವ್ರ ಮಳೆಯ ನಂತರ, ಪ್ರಾಣ ಕಳೆದುಕೊಂಡ ಎಲ್ಲರ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಾಗುವುದು. ಈ ಪರಿಹಾರವು ಮೃತರ ಕುಟುಂಬಗಳಿಗೆ ತ್ವರಿತವಾಗಿ ತಲುಪುತ್ತದೆ ಎಂದು ಅವರು ಭರವಸೆ ನೀಡಿದರು.

ಎರಡು ದಿನಗಳ ಮುಂಗಾರು ಮಳೆಗೆ ಸುಮಾರು 11 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಶುಕ್ರವಾರ ಸುರಿದ ಭಾರೀ ಮಳೆಗೆ ಅಂಡರ್‌ಪಾಸ್‌ ಜಲಾವೃತವಾಗಿತ್ತು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!