1000 ಕೋಟಿ ಮೌಲ್ಯದ ಸರ್ಕಾರಿ ಭೂಮಿ ಕಬಳಿಕೆ ಆರೋಪ: ಪತ್ರಕರ್ತ ಸೇರಿ 14 ಮಂದಿ ಅರೆಸ್ಟ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಉತ್ತರ ಪ್ರದೇಶದ ಕಾನ್ಪುರದಲ್ಲಿ ಸರ್ಕಾರಿ ಭೂಮಿ ಕಬಳಿಕೆ ಆರೋಪದ ಮೇಲೆ ಟಿವಿ ಪತ್ರಕರ್ತ ಸೇರಿದಂತೆ 14 ಜನರನ್ನು ಪೊಲೀಸರು ಬಂಧಿಸಿದ್ದಾರೆ.

ಈ ಜಮೀನಿನ ಮಾರುಕಟ್ಟೆ ಮೌಲ್ಯ 1000 ಕೋಟಿ ರೂ.ಗೂ ಹೆಚ್ಚಿದೆ. ಬಂಧನದ ನಂತರ ಪೊಲೀಸ್ ಠಾಣೆಯಲ್ಲಿ ಭಾರೀ ಕೋಲಾಹಲ ಉಂಟಾಯಿತು. ಈ ಸಂಬಂಧ ಪೊಲೀಸರು ಪ್ರೆಸ್ ನೋಟ್ ಬಿಡುಗಡೆ ಮಾಡಿ ಹೇಳಿಕೆ ನೀಡಿದ್ದಾರೆ.

ಕಂದಾಯ ಅಧಿಕಾರಿ ಮತ್ತು ಸ್ಯಾಮ್ಯುಯೆಲ್ ಗುರುದೇವ್ ಸಿಂಗ್ ಅವರು ನೀಡಿದ ದೂರಿನ ಮೇರೆಗೆ ಪತ್ರಕರ್ತ ಅವನೀಶ್ ದೀಕ್ಷಿತ್ ಮತ್ತು ಇತರರನ್ನು ಭಾನುವಾರ ಬಂಧಿಸಲಾಗಿದೆ ಎಂದು ಕಾನ್ಪುರ ಪೊಲೀಸರು ತಿಳಿಸಿದ್ದಾರೆ.
ಕೊತ್ವಾಲಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ ಹರೀಶ್ ಚಂದ್ರ ತಿಳಿಸಿದ್ದಾರೆ. ಇತರ ಆರೋಪಿಗಳ ಪತ್ತೆಗೆ ಪ್ರಯತ್ನ ನಡೆಸಲಾಗುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!