ಹೊಸದಿಗಂತ ಡಿಜಿಟಲ್ ಡೆಸ್ಕ್:
ಎಲ್ಲಾ ಕ್ಷೇತ್ರಗಳಿಗೂ ಒತ್ತು ನೀಡುತ್ತಿರುವ ಕೇಂದ್ರ ಸರ್ಕಾರ ಭತ್ತ, ಖಾರೀಫ್ ಮತ್ತು ರಬಿ ಬೆಳೆಗಳ ರೈತರಿಗೆ ಸಿಹಿ ಸುದ್ದಿ ಕೊಟ್ಟಿದೆ.
ಇದರ ಅಡಿಯಲ್ಲಿ 1000 ಎಲ್ ಎಂಟಿ (ಲಕ್ಷ ಮೆಟ್ರಿಕ್ ಟನ್) ಭತ್ತ ಖರೀದಿಸಲು ನಿರ್ಧರಿಸಿದೆ. ಈ ಮೂಲಕ 1 ಕೋಟಿಗೂ ಹೆಚ್ಚು ರೈತರಿಗೆ ಲಾಭವಾಗಲಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ.