ಅಯೋಧ್ಯಾ ರಾಮನಿಗೆ 1008 ಬ್ರಹ್ಮ‌ಕಲಶಾಭಿಷೇಕ: ಶ್ರೀ ಪೇಜಾವರ ಶ್ರೀಗಳ ನೇತೃತ್ವದಲ್ಲಿ ಚಾರಿತ್ರಿಕ ಉತ್ಸವ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಯೋಧ್ಯೆಯಲ್ಲಿ ಜನವರಿ 22 ರಂದು ಸನ್ಮಾನ್ಯ ಪ್ರಧಾನಿ ನರೇಂದ್ರ ಮೋದಿಯವರ ಯಜಮಾನಿಕೆಯಲ್ಲಿ ನೂತನ ಮಂದಿರದಲ್ಲಿ ಶ್ರೀರಾಮನ ಪ್ರತಿಷ್ಠಾನೆಯು ವಿಧ್ಯಕ್ತವಾಗಿ ನೆರವೇರಿತ್ತು. ಮರುದಿನದಿಂದ ಶ್ರೀ ಪೇಜಾವರ ಶ್ರೀಗಳ ದಿವ್ಯ ನೇತೃತ್ವದಲ್ಲಿ 48 ದಿನಗಳ ಮಂಡಲೋತ್ಸವ ಆರಂಭವಾಗಿತ್ತು.

ಇಂದು ಭಾನುವಾರ ಅದರ ಕೊನೆಯ ದಿನವಾಗಿದ್ದು ಶ್ರೀರಾಮನಿಗೆ ವೈಭವದಿಂದ 1008 ಕಲಶಾಭಿಷೇಕ ಸಹಿತ ಬ್ರಹ್ಮಕಲಶೋತ್ಸವ ನೆರವೇರಿಸುವ ಬಗ್ಗೆ ಬೆಳಿಗ್ಗೆಯಿಂದಲೇ ನೂರಾರು ಋತ್ವಿಜರ ಉಪಸ್ಥಿತಿಯಲ್ಲಿ ತತ್ವ ಹೋಮ ಸಹಿತ ವಿವಿಧ ಹೋಮ ಹವನಾದಿಗಳು, ಕಲಶ ಸ್ಥಾಪನಾ ಪೂರ್ವಕ ಕಲಶ ಪೂಜೆ ವಿಧಿ ವಿಧಾನಗಳು ಇದೀಗ ಆರಂಭವಾಗಿದೆ.

ಶ್ರೀರಾಮನ ಬ್ರಹ್ಮ‌ಕಲಶೋತ್ಸವ ನಿಮಿತ್ತ ಇಡೀ ರಾಮಮಂದಿರವನ್ನು ಆಕರ್ಷಕ ಪುಷ್ಪಗಳಿಂದ ಅಲಂಕರಿಸಲಾಗಿದೆ.

ಮಂದಿರದಲ್ಲಿ ಇವತ್ತೂ ಅಸಂಖ್ಯ ಭಕ್ತರು ಸಾಲು ಸಾಲು ಆಗಮಿಸಿ ದೇವರ ದರ್ಶನ ಪಡೆಯುತ್ತಿದ್ದಾರೆ.
ಪವಿತ್ರ ಕಲಶಾಭಿಷೇಕಕ್ಕೆ ಶ್ರೀಗಳು ಸರಯೂ ಮಾತ್ರವಲ್ಲದೇ ಗಂಗಾ ಅಲಕನಂದಾ ಸಹಿತ ಅನೇಕ ನದಿಗಳ ಪವಿತ್ರ ಜಲವನ್ನು ತರಿಸಿ ಬಳಸಿಕೊಂಡಿದ್ದಾರೆ. ಭಾನುವಾರ ಬೆಳಿಗ್ಗೆಯಿಂದಲೇ ಅಯೋಧ್ಯೆಯಲ್ಲಿ ಸಂಭ್ರಮ ಸಡಗರ ಕಾಣಿಸುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!