ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿತ್ರದುರ್ಗದ ರೇಣುಕಾಸ್ವಾಮಿ ಮರ್ಡರ್ ನಡೆದು ಹತ್ತು ದಿನಗಳಾದ್ರೂ ಈವರೆಗೂ ಆತನ ಫೋನ್ ಪತ್ತೆಯಾಗಿಲ್ಲ.
ಜೂನ್ 8ರಂದು ಸಂಜೆ ದರ್ಶನ್ ಹಾಗೂ ಆತನ ಗ್ಯಾಂಗ್ ಪಟ್ಟಣಗೆರೆ ಶೆಡ್ನಲ್ಲಿ ರೇಣುಕಾಸ್ವಾಮಿಯನ್ನು ಕೊಲೆ ಮಾಡಿತ್ತು. ಅದೇ ದಿನ ಬೆಳಗ್ಗೆ ಆರೋಪಿಗಳು ಚಿತ್ರದುರ್ಗದಿಂದ ರೇಣುಕಾಸ್ವಾಮಿಯನ್ನು ಕಿಡ್ನಾಪ್ ಮಾಡಿ ಕರೆತಂದಿದ್ದಾರೆ. ಅಂದು ಬೆಳಗ್ಗೆ ಚಿತ್ರದುರ್ಗದಲ್ಲಿ ರೇಣುಕಾಸ್ವಾಮಿ ಮೊಬೈಲ್ ಸ್ವಿಚ್ಆಫ್ ಆಗಿತ್ತು.
ಮಧ್ಯಾಹ್ನದ ವೇಳೆ ಆರ್ಆರ್ ನಗರದಲ್ಲಿ ರೇಣುಕಾಸ್ವಾಮಿ ಮೊಬೈಲ್ ಅನ್ನು ಸ್ವಿಚ್ಆನ್ ಮಾಡಲಾಗಿದೆ. ಜೂನ್ 8ರ ಸಂಜೆ ವೇಳೆಗೆ ಪಟ್ಟಣಗೆರೆಯಲ್ಲಿ ಮತ್ತೆ ಮೊಬೈಲ್ ಸ್ವಿಚ್ಆಫ್ ಆಗಿದೆ. ಇದಾದ ನಂತರ ಫೋನ್ ಬಗ್ಗೆ ಯಾವುದೇ ಸುಳಿವು ಸಿಕ್ಕಿಲ್ಲ.