ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿಎಜಿ ವರದಿ ಮಂಡನೆಗೂ ಮುನ್ನ ನಡೆದ ಗದ್ದಲದ ನಡುವೆಯೇ ಪ್ರತಿಪಕ್ಷದ ನಾಯಕಿ ಅತಿಶಿ ಮತ್ತು ಆಪ್ ಶಾಸಕ ಗೋಪಾಲ್ ರೈ ಸೇರಿದಂತೆ 12 ಎಎಪಿ ಶಾಸಕರನ್ನು ಸ್ಪೀಕರ್ ವಿಜೇಂದರ್ ಗುಪ್ತಾ ಅಮಾನತುಗೊಳಿಸಿದ್ದರಿಂದ ದೆಹಲಿ ವಿಧಾನಸಭೆಯಲ್ಲಿ ಉದ್ವಿಗ್ನತೆ ಉಂಟಾಯಿತು.
ಲೆಫ್ಟಿನೆಂಟ್ ಗವರ್ನರ್ ತಮ್ಮ ಭಾಷಣವನ್ನು ಪ್ರಾರಂಭಿಸಿದ ತಕ್ಷಣ, ಎಎಪಿ ಶಾಸಕರು ಘೋಷಣೆಗಳನ್ನು ಕೂಗಲು ಪ್ರಾರಂಭಿಸಿದರು, ಇದು ಸದನದಲ್ಲಿ ಗೊಂದಲಕ್ಕೆ ಕಾರಣವಾಯಿತು. ಎಲ್ಜಿ ಭಾಷಣಕ್ಕೂ ಮುನ್ನ ಎಎಪಿ ಸದಸ್ಯರು ಜೈ ಭೀಮ್ ಘೋಷಣೆಗಳನ್ನು ಕೂಗಿದರು. ನಂತರ ಶಾಸಕರನ್ನು ಸದನದಿಂದ ಅಮಾನತು ಮಾಡಲಾಗಿತ್ತು.
ನಂತರ ವಿಧಾನಸಭೆಯ ಹೊರಗೆ ತಮ್ಮ ಪ್ರತಿಭಟನೆಯನ್ನು ನಡೆಸಿದರು ಮತ್ತು ಬಾಬಾಸಾಹೇಬ್ ಅಂಬೇಡ್ಕರ್ ಅವರ ಭಿತ್ತಿಪತ್ರಗಳನ್ನು ಹಿಡಿದು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ.