ಹೊಸದಿಗಂತ ಡಿಜಿಟಲ್ ಡೆಸ್ಕ್:
ಮದುವೆ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದ ವೇಳೆ ವಾಹನ ಕಂದಕಕ್ಕೆ ಬಿದ್ದ ಪರಿಣಾಮ 11 ಮಂದಿ ಮೃತಪಟ್ಟಿರುವ ಘಟನೆ ಉತ್ತರಾಖಂಡದಲ್ಲಿ ನಡೆದಿದೆ.
ಉತ್ತರಾಖಂಡದ ಚಂಪಾವತ್ ಜಿಲ್ಲೆಯಲ್ಲಿ ಸುಖಿಧಾಂಗ್-ದಂಡಮಿನಾರ್ ರಸ್ತೆಯಲ್ಲಿ ವಾಹನ ಆಯತಪ್ಪಿ ಕಂದಕಕ್ಕೆ ಉರುಳಿದೆ. ಮೃತರನ್ನು ಚಂಪಾವತ್ ಜಿಲ್ಲೆಯ ತನಕ್ ಪುರದ ನಿವಾಸಿಗಳು ಎಂದು ಗುರುತಿಸಲಾಗಿದೆ.
ಈ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು, ರಕ್ಷಣಾ ಪಡೆಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಗಾಯಗೊಂಡ ಇಬ್ಬರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಈ ಘಟನೆಗೆ ಸಂತಾಪ ಸೂಚಿಸಿದ ಪ್ರಧಾನಿ ಮೋದಿ, ಮೃತರ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ಹಾಗೂ ಗಾಯಾಳುಗಳಿಗೆ 50 ಸಾವಿರ ರೂ. ಪರಿಹಾರ ಘೋಷಿಸಿದ್ದಾರೆ.
PM @narendramodi has announced an ex-gratia of Rs. 2 lakh each from PMNRF for the next of kin of those who lost their lives due to an accident in Uttarakhand. The injured would be given Rs. 50,000.
— PMO India (@PMOIndia) February 22, 2022