ಕಾಡುಪ್ರಾಣಿ ದಾಳಿಯಿಂದ 15 ದಿನಗಳಲ್ಲಿ 11 ಜನ ಸಾವು: ಸಚಿವ ಈಶ್ವರ್ ಖಂಡ್ರೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ರಾಜ್ಯದಲ್ಲಿ ಕಾಡುಪ್ರಾಣಿ ದಾಳಿಯಿಂದ 15 ದಿನಗಳಲ್ಲಿ 11 ಜನ ಮೃತಪಟ್ಟಿದ್ದಾರೆ ಎಂದು ಅರಣ್ಯ ಇಲಾಖೆ ಸಚಿವ ಈಶ್ವರ್ ಖಂಡ್ರೆ ಹೇಳಿದರು.
ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು ‘ರಾಜ್ಯದಲ್ಲಿ ಕಳೆದ 15 ದಿನಗಳಲ್ಲಿ ಒಟ್ಟು 11 ಮಂದಿ ಸಾವನ್ನಪ್ಪಿದ್ದಾರೆ.ಮಾನವ ಪ್ರಾಣಿ ಸಂಘರ್ಷದ ಬಗ್ಗೆ ಚರ್ಚೆ ಮಾಡಿದ್ದೇವೆ’ ಎಂದು ಹೇಳಿದರು.

ಇತ್ತೀಚೆಗೆ ರಾಜ್ಯದಲ್ಲಿ ಮಾನವ ಮತ್ತು ವನ್ಯಪ್ರಾಣಿ ಸಂಘರ್ಷ ಹೆಚ್ಚುತ್ತಿರುವ ಹಿನ್ನಲೆ ಇಂದು ಸಿಎಂ ಸಿದ್ದರಾಮಯ್ಯ ಗೃಹ ಕಚೇರಿ ಕೃಷ್ಣಾದಲ್ಲಿ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!