ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾಲ್ಡೀವ್ಸ್ ಕೋಸ್ಟ್ ಗಾರ್ಡ್ ತಮಿಳುನಾಡಿಗೆ ಸೇರಿದ ಸುಮಾರು 12 ಮೀನುಗಾರರನ್ನು ಬಂಧಿಸಿದ್ದು, ಅವರ ಮತ್ತು ಅವರ ದೋಣಿ ಬಿಡುಗಡೆಗೆ ಕ್ರಮಕೈಗೊಳ್ಳಬೇಕು ಎಂದು ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರು ಶನಿವಾರ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಈ ಸಂಬಂಧ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರಿಗೆ ಪತ್ರ ಬರೆದಿರುವ ಸ್ಟಾಲಿನ್, ಅಕ್ಟೋಬರ್ 1 ರಂದು ತೂತುಕುಡಿ ಜಿಲ್ಲೆಯಿಂದ ಯಾಂತ್ರೀಕೃತ ದೋಣಿಯಲ್ಲಿ ಮೀನುಗಾರಿಕೆಗೆ ತೆರಳಿದ್ದ ಮೀನುಗಾರರನ್ನು ಮಾಲ್ಡೀವ್ಸ್ ಕೋಸ್ಟ್ ಗಾರ್ಡ್ ತಿನಾಧೂ ದ್ವೀಪದ ಬಳಿ ಬಂಧಿಸಿದೆ ಎಂದು ತಿಳಿಸಿದ್ದಾರೆ.
ಬಂಧಿತ ಮೀನುಗಾರರನ್ನು ಮತ್ತು ಅವರ ದೋಣಿಯನ್ನು ಶೀಘ್ರವಾಗಿ ಬಿಡುಗಡೆ ಮಾಡಲು ರಾಜತಾಂತ್ರಿಕ ಮಾರ್ಗಗಳ ಮೂಲಕ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ನಾನು ನಿಮ್ಮನ್ನು ವಿನಂತಿಸುತ್ತೇನೆ’ಎಂದು ಮನವಿ ಮಾಡಿದ್ದಾರೆ.