August 11, 2026
Tuesday, August 11, 2026
spot_img

ತಮಿಳುನಾಡಿಗೆ 12 ಸಾವಿರ ಕ್ಯೂಸೆಕ್ ನೀರು? ರಾಜ್ಯದ ರೈತರ ಹಿತರಕ್ಷಣೆಗೆ ಸಿಎಂ ಭರವಸೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಾಜ್ಯದಲ್ಲಿ ಮತ್ತೆ ಕಾವೇರಿ ನದಿ ನೀರಿನ ಜಟಾಪಟಿ ಆರಂಭವಾಗಿದ್ದು, ತಮಿಳುನಾಡಿಗೆ ಪ್ರತಿದಿನ 12,000 ಕ್ಯೂಸೆಕ್ಸ್ ಕಾವೇರಿ ನೀರನ್ನು ಬಿಡುಗಡೆ ಮಾಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಆದೇಶಿಸಿದೆ. ಈ ಮಹತ್ವದ ಬೆಳವಣಿಗೆಯ ಬೆನ್ನಲ್ಲೇ ಮುಖ್ಯಮಂತ್ರಿ ಡಿ,ಕೆ.ಶಿವಕುಮಾರ್ ಹಾಗೂ ಸಚಿವ ರಾಮಲಿಂಗಾರೆಡ್ಡಿ ಅವರು ಜಂಟಿಯಾಗಿ ಪ್ರತಿಕ್ರಿಯಿಸಿದ್ದು, ರಾಜ್ಯದ ರೈತರ ಹಿತವನ್ನು ಯಾವುದೇ ಕಾರಣಕ್ಕೂ ಬಲಿ ಕೊಡುವುದಿಲ್ಲ ಎಂದು ದೃಢವಾಗಿ ಹೇಳಿದ್ದಾರೆ.‌

ಕಾನೂನು ಮತ್ತು ರಾಜಕೀಯ ಹೋರಾಟಕ್ಕೆ ಸಿದ್ಧ

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, ನಾವು ಒಂದು ಜವಾಬ್ದಾರಿಯುತ ಸರ್ಕಾರವಾಗಿ ನ್ಯಾಯಾಲಯ ಹಾಗೂ ಕಾವೇರಿ ಸಮಿತಿಯ ಆದೇಶಗಳನ್ನು ಗೌರವಿಸಬೇಕಾಗುತ್ತದೆ. ಆದರೆ, ಅದೇ ಸಮಯದಲ್ಲಿ ನಮ್ಮ ರಾಜ್ಯದ ರೈತರ ಹಿತ ಕಾಯುವುದು ನಮ್ಮ ಮೊದಲ ಆದ್ಯತೆಯಾಗಿದೆ. ಪ್ರಸ್ತುತ ನಮ್ಮ ಜಲಾಶಯಗಳಲ್ಲಿರುವ ನೀರಿನ ಲಭ್ಯತೆಯನ್ನು ಸಂಪೂರ್ಣವಾಗಿ ಪರಿಶೀಲಿಸಲಾಗುತ್ತಿದೆ. ಕೋರ್ಟ್ ಆದೇಶವನ್ನು ಪಾಲಿಸುತ್ತಲೇ ರಾಜ್ಯದ ರೈತರ ಬೆಳೆಗಳನ್ನು ಉಳಿಸಿಕೊಳ್ಳಲು ಅಗತ್ಯವಿರುವ ಎಲ್ಲಾ ಕಾನೂನಾತ್ಮಕ ಮತ್ತು ರಾಜಕೀಯ ಹೋರಾಟಗಳನ್ನು ನಡೆಸಲಿದ್ದೇವೆ ಎಂದು ಸ್ಪಷ್ಟಪಡಿಸಿದರು.

ರೈತರ ಬೆಳೆ ರಕ್ಷಣೆಗೆ ಸರ್ಕಾರದ ಭರವಸೆ

ಕಾವೇರಿ ಕೊಳ್ಳದ ರೈತರಲ್ಲಿ ಮೂಡಿರುವ ಆತಂಕವನ್ನು ದೂರ ಮಾಡಲು ಯತ್ನಿಸಿದ ಸಚಿವರು, ರಾಜ್ಯದ ರೈತರು ಧೃತಿಗೆಡಬೇಕಾದ ಅಗತ್ಯವಿಲ್ಲ. ಕಾವೇರಿ ನೀರನ್ನೇ ನಂಬಿ ಬದುಕುತ್ತಿರುವ ನಮ್ಮ ಜಿಲ್ಲೆಗಳ ರೈತರ ಬೆಳೆಗಳಿಗೆ ಯಾವುದೇ ಹಾನಿಯಾಗದಂತೆ ಸರ್ಕಾರ ಮುನ್ನೆಚ್ಚರಿಕೆ ವಹಿಸಲಿದೆ. ತಮಿಳುನಾಡಿಗೆ ನೀರು ಹರಿಸುವ ಮುನ್ನ ನಮ್ಮ ಕೃಷಿ ಮತ್ತು ಕುಡಿಯುವ ನೀರಿನ ಅಗತ್ಯತೆಗಳನ್ನು ಗಣನೆಗೆ ತೆಗೆದುಕೊಳ್ಳಲಾಗುವುದು ಎಂದರು.

ಇದನ್ನೂ ಓದಿ:

ಮುಂದಿನ ಹೆಜ್ಜೆಯ ಬಗ್ಗೆ ಮಹತ್ವದ ತುರ್ತು ಸಭೆ

ಸಿಡಬ್ಲ್ಯೂಆರ್‌ಸಿ ಆದೇಶದಿಂದ ರಾಜ್ಯಕ್ಕೆ ಎದುರಾಗಲಿರುವ ನೀರಿನ ಕೊರತೆಯನ್ನು ನಿಭಾಯಿಸಲು ಮತ್ತು ಇದರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸುವ ಕುರಿತು ಚರ್ಚಿಸಲು ಸರ್ಕಾರ ಮುಂದಾಗಿದೆ. ಇದಕ್ಕಾಗಿ ಕಾನೂನು ತಜ್ಞರು, ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ಹಾಗೂ ಹಿರಿಯ ಸಚಿವರ ಉಪಸ್ಥಿತಿಯಲ್ಲಿ ತುರ್ತು ಸಭೆಯನ್ನು ಕರೆಯಲಾಗಿದ್ದು, ಈ ಸಭೆಯಲ್ಲಿ ಕರ್ನಾಟಕದ ಮುಂದಿನ ಅಧಿಕೃತ ನಡೆ ಹಾಗೂ ರಣತಂತ್ರದ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !