ಹೊಸದಿಗಂತ ಡಿಜಿಟಲ್ ಡೆಸ್ಕ್:
ಟಿ20 ವಿಶ್ವಕಪ್ ವಿಜೇತ ಭಾರತ ತಂಡಕ್ಕೆ ಬಿಸಿಸಿಐ ನೀಡಿದ್ದ 125 ಕೋಟಿ ರೂ. ನಗದು ಬಹುಮಾನ ಹಂಚಿಕೆ ಮಾಡಲಾಗಿದೆ.
ಟಿ20 ವಿಶ್ವಕಪ್ಗೆ ಭಾರತ ತಂಡಕ್ಕೆ ಆಯ್ಕೆಯಾಗಿದ್ದ 15 ಆಟಗಾರರು, ಮೀಸಲು ಆಟಗಾರರು, ಕೋಚ್ ಹಾಗೂ ಸಹಾಯಕ ಸಿಬ್ಬಂದಿ ಸೇರಿದಂತೆ ಒಟ್ಟು 42 ಸದಸ್ಯರಿಗೆ ಬಿಸಿಸಿಐ ನಗದು ಬಹುಮಾನವನ್ನು ಹಂಚಿಕೆ ಮಾಡಲಾಗಿದೆ.
ಮುಖ್ಯಕೋಚ್ ರಾಹುಲ್ ದ್ರಾವಿಡ್, ವಿಶ್ವಕಪ್ ತಂಡಕ್ಕೆ ಆಯ್ಕೆಯಾದ 15 ಆಟಗಾರರು ತಲಾ 5 ಕೋಟಿ ರೂ. ಬಹುಮಾನ ಸ್ವೀಕರಿಸಿದ್ದಾರೆ. ಈ ಪೈಕಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಸಹ ಸೇರಿದ್ದಾರೆ.
ಅಲ್ಲದೇ ಮೀಸಲು ಆಟಗಾರರಾಗಿ ಆಯ್ಕೆಯಾಗಿದ್ದ ರಿಂಕು ಸಿಂಗ್, ಶುಭಮನ್ ಗಿಲ್, ಅವೇಶ್ ಖಾನ್ ಹಾಗೂ ಖಲೀಲ್ ಅಹ್ಮದ್ ಅವರಿಗೂ ತಲಾ 1 ಕೋಟಿ ರೂ. ಬಹುಮಾನ ವಿತರಿಸಲಾಗಿದೆ.
ಬ್ಯಾಟಿಂಗ್ ಕೋಚ್ ವಿಕ್ರಮ್ ರಾಥೋಡ್, ಫೀಲ್ಡಿಂಗ್ ಕೋಚ್ ಟಿ.ದಿಲೀಪ್ ಕುಮಾರ್ ಹಾಗೂ ಬೌಲಿಂಗ್ ಕೋಚ್ ಪಾರಸ್ ಮಾಂಬ್ರೆ ಸೇರಿದಂತೆ ಕೋಚಿಂಗ್ ಸಿಂಬ್ಬಂದಿಗೆ ತಲಾ 2.5 ಕೋಟಿ ರೂ. ಬಹುಮಾನ ಸಿಕ್ಕಿದೆ. ಇನ್ನೂ ಮುಖ್ಯಸ್ಥ ಅಜಿತ್ ಅಗರ್ಕರ್ ಸೇರಿದಂತೆ ಆಯ್ಕೆ ಸಮಿತಿಯ ಸದಸ್ಯರಿಗೆ ತಲಾ 1 ಕೋಟಿ ರೂ. ವಿತರಿಸಲಾಗಿದೆ.
ಟೀಂ ಇಂಡಿಯಾ ಫಿಸಿಯೋಥೆರಪಿಸ್ಟ್ಗಳಾದ ಕಮಲೇಶ್ ಜೈನ್, ಯೋಗೇಶ್ ಪರ್ಮಾರ್ ಮತ್ತು ತುಳಸಿ ರಾಮ್ ಯುವರಾಜ್ಗೆ ತಲಾ 2 ಕೋಟಿ ರೂ., ಭಾರತ ತಂಡ ಥ್ರೋಡೌನ್ ಸ್ಪೆಷಲಿಸ್ಟ್ಗಳಾದ ರಾಘವಿಂದ್ರ ದಿವಿಗಿ, ನುವಾನ್ ಉದೆನೆಕೆ ಮತ್ತು ದಯಾನಂದ್ ಗರಾನಿಗೆ ತಲಾ 2 ಕೋಟಿ ರೂ., ಟೀಂ ಇಂಡಿಯಾ ಮಸಾಜ್ ಥೆರಪಿಸ್ಟ್ಗಳಾದ ರಾಜೀವ್ ಕುಮಾರ್ ಮತ್ತು ಅರುಣ್ ಕಾನಡೆಗೆ ತಲಾ 2 ಕೋಟಿ ರೂ., ಭಾರತ ತಂಡದ ಸ್ಟ್ರೆಂಗ್ತ್ ಅ್ಯಂಡ್ ಕಂಡೀಷನಿಂಗ್ ಕೋಚ್ ಸೋಹಮ್ ದೇಸಾಯಿಗೆ 2 ಕೋಟಿ ರೂ. ವಿತರಿಸಲಾಗಿದೆ.