March 3, 2026
Tuesday, March 3, 2026
spot_img

ಮ್ಯಾನ್ಮಾರ್‌ನಲ್ಲಿ ವಂಚಕರ ಬಲೆಯಲ್ಲಿ ಸಿಲುಕಿದ್ದ 25 ಮಂದಿ ಕನ್ನಡಿಗರು ಸೇರಿ 125 ಭಾರತೀಯರ ರಕ್ಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಉದ್ಯೋಗದ ಆಸೆಗೆ ಬಿದ್ದು ಮ್ಯಾನ್ಮಾರ್‌ನಲ್ಲಿ ವಂಚಕರ ಬಲೆಯಲ್ಲಿ ಸಿಲುಕಿಕೊಂಡಿದ್ದ 25 ಮಂದಿ ಕನ್ನಡಿಗರು ಸೇರಿ ಒಟ್ಟು 125 ಮಂದಿ ಭಾರತೀಯರನ್ನು ರಕ್ಷಣೆ ಮಾಡಲಾಗಿದ್ದು, ಥೈಲ್ಯಾಂಡ್ ನಿಂದ ಭಾರತಕ್ಕೆ ಕರೆತರಲಾಗಿದೆ.

ಇದರೊಂದಿಗೆ, ಈ ವರ್ಷದ ಮಾರ್ಚ್‌ನಿಂದ ಮಯನ್ಮಾರ್‌ನ ಕಳ್ಳಸಾಗಣೆ ಕೇಂದ್ರಗಳಿಂದ ಒಟ್ಟು 1,500 ಭಾರತೀಯರನ್ನು ಥೈಲ್ಯಾಂಡ್ ಮೂಲಕ ದೇಶಕ್ಕೆ ಮರಳಿ ಕರೆತರಲಾಗಿದೆ ಎಂದು ಭಾರತೀಯ ರಾಯಭಾರ ಕಚೇರಿ ಮಾಹಿತಿ ನೀಡಿದೆ.

ಆಗ್ನೇಯ ಏಷ್ಯಾದ ಕಳ್ಳಸಾಗಣೆ ಕೇಂದ್ರಗಳಲ್ಲಿ ಸಿಲುಕಿರುವ ಭಾರತೀಯರನ್ನು ಸುರಕ್ಷಿತವಾಗಿ ಮರಳಿ ಕರೆತರುವ ಭಾರತ ಸರ್ಕಾರದ ಪ್ರಯತ್ನಗಳ ಭಾಗವಾಗಿ, ಬ್ಯಾಂಕಾಕ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಮತ್ತು ಥೈಲ್ಯಾಂಡ್‌ನ ಚಿಯಾಂಗ್ ಮಾಯ್ ಪ್ರಾಂತ್ಯದಲ್ಲಿರುವ ಭಾರತೀಯ ದೂತವಾಸವು ಭಾರತೀಯ ಪ್ರಜೆಗಳನ್ನು ಮರಳಿ ಕರೆತರಲು ಥಾಯ್ ಸರ್ಕಾರ ಮತ್ತು ಟಕ್ ಪ್ರಾಂತ್ಯದ ವಿವಿಧ ಸಂಸ್ಥೆಗಳೊಂದಿಗೆ ನಿಕಟ ಸಮನ್ವಯದೊಂದಿಗೆ ಕೆಲಸ ಮಾಡಿದೆ.

ಅಲ್ಲದೇ, ಭಾರತೀಯ ನಾಗರಿಕರು ವಿದೇಶಗಳಲ್ಲಿ ಉದ್ಯೋಗಾವಕಾಶ ಸ್ವೀಕರಿಸುವ ಮೊದಲು ವಿದೇಶಿ ಉದ್ಯೋಗದಾತರ ರುಜುವಾತುಗಳನ್ನು ಪರಿಶೀಲಿಸಲು ಮತ್ತು ನೇಮಕಾತಿ ಏಜೆಂಟ್‌ಗಳು ಮತ್ತು ಕಂಪನಿಗಳ ದಾಖಲೆಯನ್ನು ಪರಿಶೀಲಿಸಲು ಬಲವಾಗಿ ಸಲಹೆ ನೀಡಲಾಗಿದೆ.

ಇದಲ್ಲದೇ, ಭಾರತೀಯ ಪಾಸ್‌ಪೋರ್ಟ್ ಹೊಂದಿರುವವರಿಗೆ ಥೈಲ್ಯಾಂಡ್‌ಗೆ ವೀಸಾ-ಮುಕ್ತ ಪ್ರವೇಶವು ಪ್ರವಾಸೋದ್ಯಮ ಮತ್ತು ಅಲ್ಪಾವಧಿಯ ವ್ಯಾಪಾರ ಉದ್ದೇಶಗಳಿಗಾಗಿ ಮಾತ್ರ ಮತ್ತು ಥೈಲ್ಯಾಂಡ್‌ನಲ್ಲಿ ಉದ್ಯೋಗವನ್ನ ಹುಡುಕಲು ದುರುಪಯೋಗಪಡಿಸಿಕೊಳ್ಳಬಾರದು ಎಂದು ಥೈಲ್ಯಾಂಡ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಹೇಳಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !