ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತದ ರೈತರಿಗೆ ಆರ್ಥಿಕ ಸಹಾಯ ಮಾಡುವ ಉದ್ದೇಶದಿಂದ ಪ್ರಾರಂಭಗೊಂಡ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯು ಲಕ್ಷಾಂತರ ರೈತರಿಗೆ ಸಹಾಯ ಮಾಡಿದೆ. ಇದೀಗ ಈ ಯೋಜನೆಯ 12 ನೇ ಕಂತು ಪಾವತಿಯ ಕುರಿತಾಗಿ ಹುಟ್ಟಿಕೊಂಡಿದ್ದ ಗೊಂದಲಗಳು ನಿವಾರಣೆಯಾಗಿದ್ದು ನವರಾತ್ರಿ ಹಬ್ಬದ ಶುಭ ಸಂದರ್ಭದಲ್ಲಿ ರೈತರ ಖಾತೆಗಳಿಗೆ 2,000 ರೂಪಾಯಿ ಪಾವತಿಯಾಗಲಿದೆ.
PM-KISAN ಯೋಜನೆಯಡಿಯಲ್ಲಿ, ಅರ್ಹ ಭೂಹಿಡುವಳಿ ರೈತರ ಕುಟುಂಬಗಳು ಪ್ರತಿ ನಾಲ್ಕು ತಿಂಗಳಿಗೊಮ್ಮೆ 2,000 ರೂ.ಗಳಂತೆ ವರ್ಷಕ್ಕೆ 6,000 ರೂ. ಹಣಕಾಸು ನೆರವು ಪಡೆಯುತ್ತಾರೆ. ಪ್ರತಿ ವರ್ಷವೂ ಏಪ್ರಿಲ್-ಜುಲೈ, ಆಗಸ್ಟ್-ನವೆಂಬರ್ ಮತ್ತು ಡಿಸೆಂಬರ್-ಮಾರ್ಚ್ ಹೀಗೆ ಮೂರು ಕಂತುಗಳಲ್ಲಿ ಹಣವನ್ನು ನೀಡಲಾಗುತ್ತದೆ. .
ಪಿಎಂ ಕಿಸಾನ್ ವೆಬ್ಸೈಟ್ ಪ್ರಕಾರ, ಇದು ಭಾರತ ಸರ್ಕಾರದಿಂದ ಶೇಕಡಾ 100 ರಷ್ಟು ಹಣವನ್ನು ಹೊಂದಿರುವ ಕೇಂದ್ರ ವಲಯದ ಯೋಜನೆಯಾಗಿದೆ. ಆದಾಗ್ಯೂ, ಪಿಎಂ ಕಿಸಾನ್ ಯೋಜನೆಗಳಿಗೆ ಸಂಬಂಧಿಸಿದಂತೆ ಕೆಲವು ನಿಯಮಗಳಿವೆ ಮತ್ತು ಪ್ರತಿಯೊಬ್ಬ ರೈತರು ಅದಕ್ಕೆ ಅರ್ಜಿ ಸಲ್ಲಿಸಲು ಅರ್ಹರಲ್ಲ. ಸಣ್ಣ ಜಮೀನು ಹೊಂದಿರುವ ರೈತರಿಗೆ ಮಾತ್ರ ಇದು ಲಭ್ಯವಿದೆ. ಪಿಎಂ ಕಿಸಾನ್ ಯೋಜನೆಯ ಅರ್ಹತಾ ಮಾನದಂಡಗಳ ಕುರಿತು ವಿವರಗಳು ಇಲ್ಲಿವೆ.
ಯಾವುದೇ ಸರ್ಕಾರಿ ಯೋಜನೆಯು ಕೆಲವು ಅರ್ಹತಾ ಮಾನದಂಡಗಳನ್ನು ಹೊಂದಿದೆ, ಅದರ ಆಧಾರದ ಮೇಲೆ ಪ್ರಯೋಜನಗಳನ್ನು ಬಿಡುಗಡೆ ಮಾಡಲಾಗುತ್ತದೆ. ಪ್ರಧಾನ ಮಂತ್ರಿ ಕಿಸಾನ್ ಯೋಜನೆಗೆ, ಭಾರತೀಯ ಪ್ರಜೆಗಳಾಗಿರುವ ಸಣ್ಣ ಮತ್ತು ಅತಿ ಸಣ್ಣ ರೈತರು ಅರ್ಹರು. ಇದಲ್ಲದೆ, ತಮ್ಮ ಹೆಸರಿನಲ್ಲಿ ಸಾಗುವಳಿ ಭೂಮಿ ಹೊಂದಿರುವ ಎಲ್ಲಾ ಭೂಹಿಡುವಳಿ ರೈತರ ಕುಟುಂಬಗಳು ಯೋಜನೆಯಡಿ ಲಾಭ ಪಡೆಯಲು ಅರ್ಹರಾಗಿರುತ್ತಾರೆ.
ಫಲಾನುಭವಿಯ ಸ್ಥಿತಿಯನ್ನು ಪರಿಶೀಲಿಸುವುದು ಹೇಗೆ?
1) ಅಧಿಕೃತ ವೆಬ್ಸೈಟ್ pmkisan.gov.in ಗೆ ಭೇಟಿ ನೀಡಿ.
2) ಮುಖಪುಟದಲ್ಲಿ ‘ಫಾರ್ಮರ್ಸ್ ಕಾರ್ನರ್’ ವಿಭಾಗದ ಮೇಲೆ ಕ್ಲಿಕ್ ಮಾಡಿ
3) ಈಗ, ‘ಫಲಾನುಭವಿ ಸ್ಥಿತಿ’ (Beneficiary Status) ಟ್ಯಾಬ್ ಮೇಲೆ ಕ್ಲಿಕ್ ಮಾಡಿ
4) ಅಲ್ಲಿ ನಿಮ್ಮ ಮೊಬೈಲ್ ನಂಬರ್ ಅಥವಾ ನೋಂದಣಿ ಸಂಖ್ಯೆ ನಮೂದಿಸಿ ನಿಮ್ಮ ಫಲಾನುಭವಿ ಸ್ಥಿತಿಯ ಕುರಿತು ತಿಳಿದುಕೊಳ್ಳಬಹುದಾಗಿದೆ.