ಕೇರಳದಲ್ಲಿ ಆನೆ ದಾಳಿಗೆ ಕರ್ನಾಟಕ ಸರ್ಕಾರದಿಂದ 15 ಲಕ್ಷ ರೂಪಾಯಿ ಪರಿಹಾರ??

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೇರಳದ ವಯನಾಡಿನಲ್ಲಿ ಆನೆ ದಾಳಿಗೆ ಟ್ರ್ಯಾಕ್ಟರ್ ಚಾಲಕ ಮೃತಪಟ್ಟ ಪ್ರಕರಣ ಇದೀಗ ರಾಜಕೀಯದ ತಿರುವು ಪಡೆದಿದ್ದು, ಚಾಲಕನ ಕುಟುಂಬಕ್ಕೆ ಕರ್ನಾಟಕದಿಂದ 15 ಲಕ್ಷ ರೂಪಾಯಿ ಪರಿಹಾರ ನೀಡಲಾಗಿದೆ ಎಂದು ಬಿಜೆಪಿ ಗಂಭೀರ ಆರೋಪ ಮಾಡಿದೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆದೇಶದ ಮೇರೆಗೆ ರಾಜ್ಯದ ಕೈ ನಾಯಕರು 15 ಲಕ್ಷ ರೂಪಾಯಿ ನೀಡಿದ್ದಾರೆ. ಕೇರಳದಲ್ಲಿ ಆನೆ ದಾಳಿಯಾಗಿ ಟ್ರಾಕ್ಟರ್ ಚಾಲಕ ಮೃತಪಟ್ಟಿದ್ದಕ್ಕೆ ಸಂತಾಪ ಸೂಚಿಸುತ್ತೇವೆ. ಆದರೆ ಕರ್ನಾಟಕದಿಂದ ಪರಿಹಾರ ನೀಡುತ್ತಿರುವುದು ಯಾಕೆ? ಎಂದು ಬಿಜೆಪಿ ಪ್ರಶ್ನಿಸಿದೆ.

ಫೆ.10ರಂದು ಘಟನೆ ನಡೆದಿದ್ದು, ರಾಹುಲ್ ಗಾಂಧಿ ಕುಟುಂಬಕ್ಕೆ ಭೇಟಿ ನೀಡಿ ಸಾಂತ್ವನ ಹೇಳಿ 15 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಆಶ್ವಾಸನೆ ನೀಡಿದ್ದರು ಎನ್ನಲಾಗಿದೆ. ಈ ಪರಿಹಾರ ಹಣವನ್ನು ಕರ್ನಾಟಕ ಸರ್ಕಾರ ನೀಡಿದೆ ಎಂದು ಬಿಜೆಪಿ ನಾಯಕರು ಹೇಳಿದ್ದಾರೆ.

ರಾಹುಲ್ ಗಾಂಧಿ ಮೆಚ್ಚಿಸಲು ನಮ್ಮ ರಾಜ್ಯದ ಜನರ ಹಣವನ್ನು ದುರ್ಬಳಕೆ ಮಾಡಿದ್ದಾರೆ ಎಂದು ಮಾಜಿ ಸಚಿವ ಸಿಟಿ ರವಿ ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!