15 ಪರ್ಸೆಂಟ್ ಕಮಿಷನ್ ಆರೋಪ : ಗುತ್ತಿಗೆದಾರರದ್ದು ತಪ್ಪಿಲ್ಲ, ಇದು ರಾಜಕೀಯ ಎಂದ ಡಿಕೆ ಶಿವಕುಮಾರ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಡಿಸಿಎಂ ಡಿಕೆ ಶಿವಕುಮಾರ್ (D.K.Shivakumar) ವಿರುದ್ಧ ಬಿಬಿಎಂಪಿ ಗುತ್ತಿಗೆದಾರರು 15 ಪರ್ಸೆಂಟ್ ಕಮಿಷನ್ ಆರೋಪ ಮಾಡಿ ಕುರಿತು ಪ್ರತಿಕ್ರಿಯೆ ನೀಡಿದ ಶಿವಕುಮಾರ್, ಗುತ್ತಿಗೆದಾರರದ್ದು ತಪ್ಪಿಲ್ಲ, ಕೆಲವು ರಾಜಕೀಯದವರು ಮಾಡಿದ್ದು ಎಂದಿದ್ದಾರೆ.

ತಿಪಟೂರು ತಾಲೂಕಿನ ನೊಣವಿನಕೆರೆ ಬಳಿ ಇರುವ ನೊಣವಿನಕೆರೆ ಅಜ್ಜಯ್ಯನ ಮಠದ ಬಳಿ ಮಾತನಾಡಿದ ಡಿಕೆ ಶಿವಕುಮಾರ್, ನೊಣವಿನಕೆರೆ ಅಜ್ಜಯ್ಯನ ಮಠಕ್ಕೆ ಬಂದಾಗ ನನ್ನ ಎನರ್ಜಿ ಹೆಚ್ಚಾಗುತ್ತದೆ. ನಾನು ಅತಿ ಹೆಚ್ಚು ಪ್ರೀತಿಸುವ ಸ್ಥಳ ಇದು, ಶ್ರೀಗಳು ಆಶೀರ್ವದಿಸುತ್ತಾರೆ ಎಂದರು.

ಅಜ್ಜಯ್ಯನ ಮೇಲೆ ಪ್ರಮಾಣ ಮಾಡು ಅಂದವರೆಲ್ಲ ಈಗ ಏನಾದರು ಎಂದು ಪ್ರಶ್ನಿಸಿದ ಡಿಕೆ ಶಿವಕುಮಾರ್, ಅಜ್ಜಯ್ಯನ ಹೆಸರು ತೆಗೆದುಕೊಂಡವರು ಈಗ ಉಲ್ಟಾ ಹೊಡೆದಿದ್ದಾರೆ. ಅವರು ಯಾಕೆ ಉಲ್ಟಾ ಹೊಡೆದರು ಅಂದರೆ, ಅದೇ ಅಜ್ಜಯ್ಯನ ಶಕ್ತಿ. ನಾನೇನಾದರು ತಪ್ಪು ಮಾಡಿದ್ದರೆ ತಾನೆ ಯೋಚನೆ ಮಾಡಬೇಕಿರುತ್ತದೆ. ಪಾಪ, ಗುತ್ತಿಗೆದಾರರದ್ದು ತಪ್ಪಿಲ್ಲ, ಕೆಲ ರಾಜಕೀಯದವರು ಮಾಡಿದ್ದು. ರಾಜಕೀಯದವರು ಮಿಸ್​ ಗೈಡ್ ಮಾಡಿ ಗುತ್ತಿಗೆದಾರರ ದಿಕ್ಕು ತಪ್ಪಿಸಿದರು ಎಂದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!