ಹೊಸದಿಗಂತ ಡಿಜಿಟಲ್ ಡೆಸ್ಕ್:
ದಾವಣಗೆರೆಯಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಮಕ್ಕಳನ್ನು ಮನೆಯಿಂದ ಹೊರಬಿಡಲು ಪೋಷಕರು ಭಯಪಡುವ ಪರಿಸ್ಥಿತಿ ಎದುರಾಗಿದೆ.
ಬಸವಾಪಟ್ಟಣದ ಬಳಿ ಬೀದಿನಾಯಿಗಳ ಹಾವಳಿಗೆ ಜನ ಭಯಭೀತರಾಗಿದ್ದು, ನಾಯಿಗಳು ೧೫ ಕುರಿಗಳನ್ನು ಕೊಂದಿವೆ, ಒಟ್ಟಾರೆ 20 ಕುರಿಗಳಿಗೆ ಗಾಯವಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ರೈತ ತಿಮ್ಮಣ್ಣನಿಗೆ ಸೇರಿದ ಕುರಿಗಳು ಇವಾಗಿದ್ದು, ನಾಲ್ಕಕ್ಕೂ ಹೆಚ್ಚು ಬೀದಿನಾಯಿಗಳು ಏಕಾಏಕಿ ದಾಳಿ ನಡೆಸಿ, ಕುರಿಗಳ ಕತ್ತಿಗೆ ಕಚ್ಚಿ ಕೊಂದಿವೆ. ಕಂದಾಯ ಇಲಾಖೆ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ಆಗಮಿಸಿದ್ದು, ಪರಿಹಾರ ನೀಡುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.