ಬಳ್ಳಾರಿ: 150 ಅಡಿ ಎತ್ತರದ ಸ್ತಂಭದ ಮೇಲೆ ಹಾರಾಡಿತು ತ್ರಿವರ್ಣ ಧ್ವಜ

ಹೊಸದಿಗಂತ ವರದಿ, ಬಳ್ಳಾರಿ:

73ನೇ ಗಣರಾಜ್ಯೋತ್ಸವದ ನಿಮಿತ್ತ ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಅವರು ನಗರದ ಎಚ್.ಆರ್.ಗವಿಯಪ್ಪ ವೃತ್ತದಲ್ಲಿರುವ 150 ಅಡಿ ಎತ್ತರದ ಸ್ತಂಭದ ಮೇಲೆ ರಾಷ್ಟ್ರಧ್ವಜ ಹಾರಿಸಿದರು.
ಈ ಸಂದರ್ಭದಲ್ಲಿ ಸಂಸದ ವೈ.ದೇವೇಂದ್ರಪ್ಪ, ಡಾ.ಸೈಯದ್ ನಾಸೀರ್ ಹುಸೇನ್, ಬಳ್ಳಾರಿ ನಗರ ಶಾಸಕರಾದ ಜಿ.ಸೋಮಶೇಖರ ರೆಡ್ಡಿ, ಬಳ್ಳಾರಿ ಗ್ರಾಮೀಣ ಶಾಸಕರಾದ ಬಿ.ನಾಗೇಂದ್ರ, ಬುಡಾ ಅಧ್ಯಕ್ಷ ಪಿ. ಪಾಲನ್ನ, ಜಿಲ್ಲಾಧಿಕಾರಿ ಪವನಕುಮಾರ ಮಾಲಪಾಟಿ, ಜಿಪಂ ಸಿಇಒ ಕೆ.ಆರ್.ನಂದಿನಿ,ಎಸ್ಪಿ ಸೈದುಲು ಅಡಾವತ್, ಮಹಾನಗರ ಪಾಲಿಕೆ ಆಯುಕ್ತ ಪ್ರೀತಿ ಗೆಹ್ಲೋಟ್, ಸಹಾಯಕ ಆಯುಕ್ತರಾದ ಡಾ.ಆಕಾಶ ಶಂಕರ್ ಸೇರಿದಂತೆ ವಿವಿಧ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಇತರರಿದ್ದರು ಇದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!