ಹೊಸದಿಗಂತ ಡಿಜಿಟಲ್ ಡೆಸ್ಕ್:
ಸುಮಾರು 15,000 ನೈರ್ಮಲ್ಯ ಕಾರ್ಯಕರ್ತರು ಪ್ರಯಾಗ್ರಾಜ್ನ ಕುಂಭಮೇಳದ ನಾಲ್ಕು ವಲಯಗಳಲ್ಲಿ ಸಿಂಕ್ರೊನೈಸ್ ಮಾಡಿದ ಸ್ವಚ್ಛತಾ ಅಭಿಯಾನ ಮಾಡುವ ಮೂಲಕ ಹೊಸ ಗಿನ್ನೆಸ್ ವಿಶ್ವ ದಾಖಲೆ ನಿರ್ಮಿಸಲು ಮುಂದಾಗಿದ್ದಾರೆ.
ಪ್ರಯಾಗರಾಜ್ ಮೇಯರ್ ಗಣೇಶ್ ಕೇಸರವಾಣಿ, ಮಹಾಕುಂಭದ ವಿಶೇಷ ಕಾರ್ಯನಿರ್ವಾಹಕ ಅಧಿಕಾರಿ ಆಕಾಂಕ್ಷಾ ರಾಣಾ ಮತ್ತು ಗಿನ್ನೆಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ಮೇಲ್ವಿಚಾರಣಾ ತಂಡ, 15,000 ಕಾರ್ಮಿಕರಿಂದ ನಡೆಯುತ್ತಿರುವ ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾಗಿದ್ದರು ಎಂದು ಹೇಳಲಾಗಿದೆ. ರಿಸ್ಟ್ಬ್ಯಾಂಡ್ನಲ್ಲಿರುವ ಕೋಡ್ ಸ್ಕ್ಯಾನ್ ಮಾಡುವ ಮೂಲಕ ನೈರ್ಮಲ್ಯ ಕಾರ್ಮಿಕರ ತಲೆ ಎಣಿಕೆ ಮಾಡಲಾಗಿದೆ. ದಾಖಲೆಯ ಅಂತಿಮ ಮೌಲ್ಯಾಂಕನ ವರದಿಯನ್ನು ಮೂರು ದಿನಗಳ ನಂತರ ಬಿಡುಗಡೆ ಮಾಡಲಾಗುವುದು ಎಂದು ಅಧಿಕೃತ ಹೇಳಿಕೆ ನೀಡಲಾಗಿದೆ.
2019 ರ ಪ್ರಯಾಗರಾಜ್ನಲ್ಲಿ ನಡೆದ ಕುಂಭದಲ್ಲಿ 10,000 ನೈರ್ಮಲ್ಯ ಕಾರ್ಯಕರ್ತರು ಸಿಂಕ್ರೊನೈಸ್ ಮಾಡಿದ ಸ್ವಚ್ಛತಾ ಅಭಿಯಾನದಲ್ಲಿ ಭಾಗವಹಿಸುವ ಮೂಲಕ ಗಿನ್ನೆಸ್ ವಿಶ್ವ ದಾಖಲೆ ಬರೆದಿದ್ದರು.