ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು ಮತ್ತಷ್ಟು ರೋಚಕ ಘಟ್ಟಕ್ಕೆ ತಿರುಗಿದ್ದು, ಶಿವಸೇನೆಯ 16 ಜನ ಬಂಡಾಯ ಶಾಸಕರಿಗೆ ವಿಧಾನಸಭೆಯ ಉಪ ಸ್ಪೀಕರ್ ಅನರ್ಹತೆಯ ನೋಟಿಸ್ ಜಾರಿ ಮಾಡಿದ್ದಾರೆ.
ಶಿವಸೇನೆ ಮುಖ್ಯಸ್ಥ, ಸಿಎಂ ಉದ್ಧವ್ ಠಾಕ್ರೆ ವಿರುದ್ಧ ಬಂಡಾಯ ಸಾರಿರುವ ಏಕನಾಥ ಶಿಂದೆ ನೇತೃತ್ವದ ಸುಮಾರು 38 ಶಾಸಕರು ಬಿಜೆಪಿ ಆಡಳಿತದ ಅಸ್ಸೋಂನ ಗುವಾಹಟಿಯಲ್ಲಿ ಬೀಡು ಬಿಟ್ಟಿದ್ದಾರೆ. ಇದೀಗ ಈ ಬಣದಲ್ಲಿರುವ 16 ಶಾಸಕರಿಗೆ ಮಹಾರಾಷ್ಟ್ರ ಉಪ ಸ್ಪೀಕರ್ ಅನರ್ಹತೆಯ ನೋಟಿಸ್ ಜಾರಿಗೊಳಿಸಿದ್ದಾರೆ. ಅಲ್ಲದೇ, ಎಲ್ಲ 16 ಶಾಸಕರು ಜೂ. 27ರ ಸೋಮವಾರರೊಳಗೆ ನೋಟಿಸ್ಗೆ ತಮ್ಮ ಲಿಖಿತ ಉತ್ತರಗಳ ಸಲ್ಲಿಸಬೇಕೆಂದು ಸೂಚಿಸಿದ್ದಾರೆ.
#MaharashtraPolitcalCrisis | Deputy Speaker of Maharashtra Assembly issues disqualification notice to 16 rebel Shiv Sena MLAs of Eknath Shinde camp currently staying in Guwahati, Assam
— ANI (@ANI) June 25, 2022