16 ಜನ ಬಂಡಾಯ ಶಾಸಕರಿಗೆ ಅನರ್ಹತೆಯ ನೋಟಿಸ್ ಜಾರಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು ಮತ್ತಷ್ಟು ರೋಚಕ ಘಟ್ಟಕ್ಕೆ ತಿರುಗಿದ್ದು, ಶಿವಸೇನೆಯ 16 ಜನ ಬಂಡಾಯ ಶಾಸಕರಿಗೆ ವಿಧಾನಸಭೆಯ ಉಪ ಸ್ಪೀಕರ್ ಅನರ್ಹತೆಯ ನೋಟಿಸ್ ಜಾರಿ ಮಾಡಿದ್ದಾರೆ.
ಶಿವಸೇನೆ ಮುಖ್ಯಸ್ಥ, ಸಿಎಂ ಉದ್ಧವ್​ ಠಾಕ್ರೆ ವಿರುದ್ಧ ಬಂಡಾಯ ಸಾರಿರುವ ಏಕನಾಥ ಶಿಂದೆ ನೇತೃತ್ವದ ಸುಮಾರು 38 ಶಾಸಕರು ಬಿಜೆಪಿ ಆಡಳಿತದ ಅಸ್ಸೋಂನ ಗುವಾಹಟಿಯಲ್ಲಿ ಬೀಡು ಬಿಟ್ಟಿದ್ದಾರೆ. ಇದೀಗ ಈ ಬಣದಲ್ಲಿರುವ 16 ಶಾಸಕರಿಗೆ ಮಹಾರಾಷ್ಟ್ರ ಉಪ ಸ್ಪೀಕರ್ ಅನರ್ಹತೆಯ ನೋಟಿಸ್ ಜಾರಿಗೊಳಿಸಿದ್ದಾರೆ. ಅಲ್ಲದೇ, ಎಲ್ಲ 16 ಶಾಸಕರು ಜೂ. 27ರ ಸೋಮವಾರರೊಳಗೆ ನೋಟಿಸ್​ಗೆ ತಮ್ಮ ಲಿಖಿತ ಉತ್ತರಗಳ ಸಲ್ಲಿಸಬೇಕೆಂದು ಸೂಚಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!