ದಿಗಂತ ವರದಿ ವಿಜಯಪುರ:
ಲೋಕಸಭಾ ಚುನಾವಣೆ ಹಿನ್ನೆಲೆ ತಪಾಸಣೆ ವೇಳೆ, ಹೈದರಾಬಾದ್ನಿಂದ ಹುಬ್ಬಳ್ಳಿಗೆ ಟೋಯೊಟಾ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ನಗದನ್ನು ನಗರದ ಸಿಂದಗಿ ಬೈಪಾಸ್ ಬಳಿ ಪೊಲೀಸರು ಜಪ್ತಿ ಮಾಡಿರುವ ಘಟನೆ ನಡೆದಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಾಜಿ ನಿಕ್ಕಂ, ಸಚಿನ್ ಮೋಯಿತೆ ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿತರಿಂದ 2 ಕೋಟಿ 93 ಲಕ್ಷದ 50 ಸಾವಿರ ನಗದು, ಟೋಯೋಟಾ ಕಾರು, ಎರಡು ಮೊಬೈಲ್ ಜಪ್ತಿ ಮಾಡಲಾಗಿದೆ. ಈ ಕುರಿತು ಗೋಳಗುಮ್ಮಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.