ನಡು ಬೀದಿಯಲ್ಲಿ ಮಾರಕಾಸ್ತ್ರಗಳನ್ನು ಹಿಡಿದು ಹೊಡೆದಾಡಿಕೊಂಡ 2 ಕುಟುಂಬ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹುಬ್ಬಳ್ಳಿಯ ಶಿವಶಂಕರ ಕಾಲೋನಿ ಬಳಿ ನಡುರಸ್ತೆಯಲ್ಲಿ ಸಂಬಂಧಿಕರ ನಡುವೆ ನಡೆದ ಮಾರಾಮಾರಿ ವೇಳೆ ಮಹಿಳೆ ಸೇರಿದಂತೆ ಆರು ಮಂದಿಯ ಮೇಲೆ ಹಲ್ಲೆ ನಡೆದಿದೆ.

ಸೋಮವಾರ ಮಧ್ಯಾಹ್ನ ಸಂಬಂಧಿಕರ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ. ಮಾರಕಾಸ್ತ್ರಗಳೊಂದಿಗೆ ಹೊಡೆದಾಡಿಕೊಂಡಿದ್ದಾರೆ. ಈ ಸಂಘರ್ಷದಲ್ಲಿ 6 ಮಂದಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಎರಡೂ ಕುಟುಂಬದ ಸದಸ್ಯರೂ ಗಂಭೀರವಾಗಿ ಗಾಯಗೊಂಡಿದ್ದಾರೆ.

ಕೌದಿ ಕುಟುಂಬದ ಮಂಜುನಾಥ ಕೌದಿ, ಶಂಕರ ಕೌದಿ, ಭರತ ಕೌದಿ, ಪಾರ್ವತಿ ಶಿಕಾರಗಾರ, ಜ್ಯೋತಿ ಅಂಚನಗೇಳಿ ಗಾಯಗೊಂಡವರು.

20 ರಿಂದ 25 ಜನರ ನಡುವೆ ಮಾರಾಮಾರಿ ನಡೆದಿದೆ. ಒಬ್ಬರನ್ನೊಬ್ಬರು ದೂಷಿಸಿಕೊಂಡು ಜಗಳವಾಡುತ್ತಾರೆ. ಈ ಘಟನೆಯಲ್ಲಿ ಗುಂಪಿನ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಯುವತಿ ಸೇರಿದಂತೆ ಮತ್ತೊಬ್ಬ ಕುಟುಂಬದ ಸದಸ್ಯರು ಗಾಯಗೊಂಡಿದ್ದಾರೆ.

ಎರಡು ಕುಟುಂಬಗಳ ನಡುವೆ ಘರ್ಷಣೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದರು. ಹಳೇ ಹುಬ್ಬಳ್ಳಿ ರೈಲು ನಿಲ್ದಾಣ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!