ಹೊಸ ದಿಗಂತ ವರದಿ, ಮಡಿಕೇರಿ :
ಗುಂಡೇಟು ತಗುಲಿ ಕಾಡಾನೆಯೊಂದು ಮೃತಪಟ್ಟಿರುವ ಘಟನೆ ಪಿರಿಯಾಪಟ್ಟಣ ತಾಲೂಕಿನ ಸುಳಗೋಡು ಗ್ರಾಮದಲ್ಲಿ ನಡೆದಿದೆ.
ಗ್ರಾಮದ ರೇವಣ್ಣ ಎಂಬವರ ಜಮೀನಿನಲ್ಲಿ ಸುಮಾರು 20 ವರ್ಷ ಪ್ರಾಯದ ಹೆಣ್ಣಾನೆ ಮೃತದೇಹ ಪತ್ತೆಯಾಗಿದೆ.
ನಾಗರಹೊಳೆ ಭಾಗದಿಂದ ಆಹಾರ ಅರಸಿಕೊಂಡು ಬಂದ ಕಾಡಾನೆಗಳ ಗುಂಪಿನಲ್ಲಿದ್ದ ಹೆಣ್ಣಾನೆ ಗುಂಡೇಟಿನಿಂದ ಮೃತಪಟ್ಟಿದೆ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.