REASI ATTACK | ಉಗ್ರನ ಸ್ಕೆಚ್‌ ತಯಾರು, ಹಿಡಿದುಕೊಟ್ಟವರಿಗೆ 20 ಲಕ್ಷ ರೂ. ಬಹುಮಾನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಜಮ್ಮು ಕಾಶ್ಮೀರದ ರಿಯಾಸಿಯಲ್ಲಿ ಬಸ್​ ಮೇಲೆ ನಡೆದ ಭಯೋತ್ಪಾದಕ ದಾಳಿ ಪ್ರಕರಣದಲ್ಲಿ ಉಗ್ರನೊಬ್ಬನ ಸ್ಕೆಚ್​ ರೆಡಿಯಾಗಿದ್ದು, ಹಿಡಿದುಕೊಟ್ಟವರಿಗೆ ಪೊಲೀಸ್​ ಇಲಾಖೆಯು 20 ಲಕ್ಷ ರೂ. ನೀಡುವುದಾಗಿ ಘೋಷಿಸಿದೆ.

ಜಮ್ಮು ಮತ್ತು ಕಾಶ್ಮೀರದ ರಿಯಾಸಿಯಲ್ಲಿ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ ಎರಡು ದಿನಗಳ ನಂತರ , ದಾಳಿಯಲ್ಲಿ ಭಾಗಿಯಾಗಿರುವ ಮೂವರು ಭಯೋತ್ಪಾದಕರ ಪೈಕಿ ಒಬ್ಬನ ರೇಖಾಚಿತ್ರವನ್ನು ಪೊಲೀಸರು ಬಿಡುಗಡೆ ಮಾಡಿದ್ದಾರೆ. ದಾಳಿಯಲ್ಲಿ  10 ಮಂದಿ ಪ್ರಾಣಬಿಟ್ಟಿದ್ದಾರೆ.

ವಿವರಗಳ ಪ್ರಕಾರ, ಪ್ರತ್ಯಕ್ಷದರ್ಶಿಗಳು ನೀಡಿದ ವಿವರಣೆಯನ್ನು ಆಧರಿಸಿ ಭಯೋತ್ಪಾದಕನ ರೇಖಾಚಿತ್ರವನ್ನು ಸಿದ್ಧಪಡಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!