ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಬರೀ ಕಾಫಿ, ತಿಂಡಿ, ಬಿಸ್ಕೆಟ್ ಹೆಸರಿನಲ್ಲಿ 200 ಕೋಟಿ ರೂಪಾಯಿ ಲೂಟಿ ಮಾಡಿದ್ದಾರೆ ಎಂದು ಬಿಜೆಪಿ ವಕ್ತಾರ ಎನ್.ಆರ್.ರಮೇಶ್ ಆರೋಪಿಸಿದ್ದಾರೆ.
ವಿದೇಶಿ ಗಣ್ಯರು ಹಾಗೂ ಅತಿಥಿಗಳಿಗೆ ಕಾಫಿ,ಬಿಸ್ಕೆಟ್, ತಿಂಡಿ ಹೆಸರಿನಲ್ಲಿ 200 ಕೋಟಿ ರೂಪಾಯಿ ಲೂಟಿಯಾಗಿದೆ, ಇದಕ್ಕೆ ತಕ್ಕ ದಾಖಲೆ ನೀಡಿದ್ದೇನೆ. ಪ್ರಕರಣವನ್ನು ಸಿಐಡಿ ಅಥವಾ ಸಿಬಿಐಗೆ ವಹಿಸಬೇಕು ಎಂದು ಆಗ್ರಹಿಸಿದ್ದಾರೆ.
ಕಳೆದ 75 ವರ್ಷಗಳಲ್ಲಿ ಎಷ್ಟು ಮಂದಿ ರಾಜ್ಯದ ಸಿಎಂ ಆಗಿ ಕಾರ್ಯನಿರ್ವಹಿಸಿದ್ದಾರೆ. ಆದರೆ ಯಾರ ಅವಧಿಯಲ್ಲೂ ಇಷ್ಟು ಖರ್ಚು ಆಗಿಲ್ಲ. ಅತಿಥಿ ಉಪಚಾರದ ಹೆಸರಿನಲ್ಲಿ ಸಿದ್ದರಾಮಯ್ಯ ಭ್ರಷ್ಟಾಚಾರ ನಡೆಸಿದ್ದಾರೆ ಎಂದಿದ್ದಾರೆ.