ರೈತರಿಗೆ 2000 ರೂ. ಬೆಳೆ ಪರಿಹಾರ ಹಣ: ರಾಜ್ಯ ಸರ್ಕಾರದಿಂದ ನಿರ್ಧಾರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರೈತರಿಗೆ ತಲಾ 2000 ರೂ. ವರೆಗೆ ಬೆಳೆ ಪರಿಹಾರ ಹಣ ನೀಡಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ.

ಈ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದು, ರೈತರಿಗೆ ಪರಿಹಾರ ಕೊಡಲು ಇನ್ನೂ ಪ್ರಾಥಮಿಕ ಸಭೆಯನ್ನೇ ನಡೆಸದ ಹಿನ್ನೆಲೆಯಲ್ಲಿ ರಾಜ್ಯದಿಂದ ತುರ್ತು ಕ್ರಮ ಕೈಗೊಂಡಿದ್ದು, ಕೇಂದ್ರಕ್ಕೆ ಬರೆದ ಪತ್ರಗಳಿಗೂ ಪ್ರತಿಕ್ರಿಯೆ ಇಲ್ಲ.ರಾಜ್ಯದಿಂದ ಮೂವರು ಸಚಿವರು ದೆಹಲಿಗೆ ಹೋದರೂ ಸಕಾರಾತ್ಮಕ ಪ್ರತಿಕ್ರಿಯೆ ಕೇಂದ್ರದಿಂದ ಸಿಕ್ಕಿಲ್ಲ ತಿಳಿಸಿದರು.

ಇನ್ನೂ ಉದ್ಯೋಗ ಖಾತರಿ ಯೋಜನೆಯಡಿ 150 ಮಾನವ ದಿನ ಉದ್ಯೋಗ ಕೊಡಲು ಅನುಮತಿ ಕೋರಲಾಗಿತ್ತು. ಕೇಂದ್ರ ಇನ್ನೂ ಅನುಮತಿ ನೀಡಿಲ್ಲ ಎಂದರು.

ರಾಜ್ಯದ 223 ತಾಲ್ಲೂಕುಗಳನ್ನು ಬರಪೀಡಿತ ಎಂದು ಮೂರು ಹಂತದಲ್ಲಿ ಘೋಷಿಸಿದ್ದೇವೆ‌. 48.19 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಷ್ಟ ಆಗಿದೆ. 18171.44 ಕೋಟಿ ಪೆಇಹಾರದ ಆರ್ಥಿಕ ನೆರವು ನೀಡಲು ಕೇಂದ್ರಕ್ಕೆ ಪತ್ರ ಬರೆದಿದ್ದೇವೆ ಕೇಂದ್ರ ನಮ್ಮ ತೆರಿಗೆ ಹಣದ ಪಾಲನ್ನು ನಮಗೆ ವಾಪಾಸ್ ಕೊಟ್ಟರೂ ಸಾಕು 21-9-2023 ರಂದು ಕೇಂದ್ರಕ್ಕೆ ಮೊದಲ ಮನವಿ ಮಾಡಿದ್ದೆವು. ಕೇಂದ್ರದ ತಂಡ 4/10 ರಿಂದ 9/10 ರ ವರೆಗೆ ರಾಜ್ಯ ಪ್ರವಾಸ ಮಾಡಿ ಬರ ಸಮೀಕ್ಷೆ ನಡೆಸಿ, ವರದಿ ನೀಡಿದೆ ನಾವೆಲ್ಲಾ ಕೇಂದ್ರ ತಂಡವನ್ನು ಭೇಟಿ ಮಾಡಿ ಚರ್ಚಿಸಿ ಬರದ ಸ್ಥಿತಿ ವಿವರಿಸಿದ್ದೇವೆ ಅಂತ ಹೇಳಿದರು.

ದೇಶದಲ್ಲಿ 12 ರಾಜ್ಯಗಳಲ್ಲಿ ಬರಗಾಲದ ಸ್ಥಿತಿ ಇದೆ. 4663 ಕೋಟಿ ಬೆಳೆ ನಷ್ಟ ಪರಿಹಾರ ಕೇಂದ್ರಕ್ಕೆ ಕೇಳಿದ್ದೆವು. ಕೇಂದ್ರ ಸಚಿವರಿಗೂ ಮನವಿ ಮಾಡಿದ್ದೇವೆ ಇವತ್ತಿನವರೆಗೂ ಕೇಂದ್ರ ಸಭೆಯನ್ನೇ ನಡೆಸಿಲ್ಲ. ಸಮಯ ಕೇಳಿದರೂ ಭೇಟಿಗೆ ಅವಕಾಶ ಕೊಟ್ಟಿಲ್ಲ. ಅಧಿಕಾರಿಗಳನ್ನಾದರೂ ಭೇಟಿ ಮಾಡಿ ಎಂದು ಹೇಳಿ ನಾನು ಮೂವರು ಸಚಿವರನ್ನು ದೆಹಲಿಗೆ ತೆರಳಲು ಹೇಳಿದ್ದೆ. 3 ಜನ‌ ಡೆಲ್ಲಿಗೆ ಹೋಗಿದಾರೆ. ಅಧಿಕಾರಿಗಳಿಗೆ ವಿವರಿಸಿದ್ದಾರೆ ಅಂತ ಹೇಳಿದರು.

ಫೈನಾನ್ಸ್ ಮಿನಿಸ್ಟರ್ ಅವರನ್ನು ನಮ್ಮ ಸಚಿವರು ಭೇಟಿ ಮಾಡಿದಾರೆ ಕೇಂದ್ರ ಇವತ್ತಿನವರೆಗೆ ಸಭೆ ನಡೆಸಿಲ್ಲ. ಪರಿಹಾರ ನೀಡುವ‌ ಪ್ರಕ್ರಿಯೆಯನ್ನೇ ಶುರು ಮಾಡಿಲ್ಲ ರಾಜ್ಯದ 48.19 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಷ್ಟ ಆಗಿದೆ. ಕೇಂದ್ರ ಕೃಷಿ ಮತ್ತು ಗೃಹ ಸಚಿವರನ್ನು ನಾನೇ ಭೇಟಿ ಮಾಡ್ತೀನಿ, ಸಮಯ ಕೊಡಿ ಎಂದು ಪತ್ರ ಬರೆದಿದ್ದೀನಿ. ಇವತ್ತಿನವರೆಗೂ ಸಮಯ ಕೊಟ್ಟಿಲ್ಲ ಎಂದು ಕೇಂದ್ರದ ವಿರುದ್ಧ ಅಸಮಾಧಾನ ಹೊರಹಾಕಿದರು.

ಬಿತ್ತನೆ ವೈಫಲ್ಯ ಮತ್ತು ಮಧ್ಯಂತರ ವಿಮೆ ಪರಿಹಾರಕ್ಕೆ ರಾಜ್ಯ ಸರ್ಕಾರ ಈಗಾಗಲೇ 6.5 ಲಕ್ಷ ರೈತರಿಗೆ 460 ಕೋಟಿ ನಮ್ಮ ಸರ್ಕಾರ ಬಿಡುಗಡೆ ಮಾಡಿದೆ. ಕುಡಿಯುವ ನೀರು , ಮೇವಿಗೆ 327 ಕೋಟಿ ಬಿಡುಗಡೆ, 780 ಕೋಟಿ DC ಗಳ PD ಖಾತೆಯಲ್ಲಿದೆ. ಅವರೂ ತಹಶೀಲ್ದಾರ್ ಗಳಿಗೆ ಬಿಡುಗಡೆ ಮಾಡಿದ್ದಾರೆ ಯಾವ ತಾಲ್ಲೂಕುಗಳಲ್ಲೂ ಕುಡಿಯುವ ನೀರಿಗೆ ಸಮಸ್ಯೆ ಇಲ್ಲದಂತೆ ನಿರ್ವಹಿಸಿದ್ದೇವೆ ಹಲವು ತಾಲ್ಲೂಕುಗಳ 60 ಹಳ್ಳಿಗಳಲ್ಲಿ ಟ್ಯಾಂಕರ್ ನೀರಿನ ವ್ಯವಸ್ಥೆ ಮಾಡಿದ್ದೇವೆ ಹೊರ ರಾಜ್ಯಕ್ಕೆ ಮೇವು ಹೋಗದಂತೆ ತಡೆದಿದ್ದೇವೆ. ಮೇವಿನ‌ ಬೀಜ ವಿತರಣೆ ಮಾಡಿದ್ದೇವೆ.ಈಗ ಮೊದಲ ಕಂತು ಅರ್ಹ ರೈತರಿಗೆ ತಲಾ 2000 ರೂವರೆಗೆ ಬೆಳೆ ಪರಿಹಾರ ಹಣ ನೀಡಲು ನಿರ್ಧರಿಸಿದ್ದೇವೆ ಎಂದು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!