ಕೃಷಿ ಉಡಾನ್ ಯೋಜನೆಯಡಿ 21 ವಿಮಾನ ನಿಲ್ದಾಣಗಳನ್ನು ಸೇರಿಸಲು ಚಿಂತನೆ: ಜ್ಯೋತಿರಾಧಿತ್ಯ ಸಿಂಧಿಯಾ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಕೃಷಿ ಉಡಾನ್ ಯೋಜನೆಯಡಿ ಹೆಚ್ಚುವರಿಯಾಗಿ 21 ವಿಮಾನ ನಿಲ್ದಾಣಗಳನ್ನು ಸೇರಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾಧಿತ್ಯ ಸಿಂಧಿಯಾ ಮಂಗಳವಾರ ತಿಳಿಸಿದ್ದಾರೆ.

ಇಂದೋರ್ ನಲ್ಲಿ ನಡೆದ ಜಿ-20 ಕೃಷಿ ಪ್ರತಿನಿಧಿಗಳ ಸಭೆಯ ಎರಡನೇ ದಿನದ ಚರ್ಚೆಯ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸಿಂಧಿಯಾ, ಕನಿಷ್ಠ 31 ವಿಮಾನ ನಿಲ್ದಾಣಗಳು ಕೃಷಿ ಉಡಾನ್ ಯೋಜನೆಯಡಿ ಇವೆ. ಮತ್ತೆ 21 ವಿಮಾನ ನಿಲ್ದಾಣಗಳನ್ನು ಈ ಯೋಜನೆಯಡಿ ಸೇರಿಸಲು ರಕ್ಷಣಾ ಸಚಿವಾಲಯದೊಂದಿಗೆ ಮಾತುಕತೆ ನಡೆಸಲಾಗುತ್ತಿದೆ ಎಂದರು.

ಕೃಷಿ ಉತ್ಪನ್ನಗಳ ತ್ವರಿತ ಸಾಗಣೆಯ ವಿಶೇಷ ವಿಮಾನವಾಗಿರುವ ಕೃಷಿ ಉಡಾನ್ ಯೋಜನೆ ಅಭೂತಪೂರ್ವ ಯಶಸ್ಸು ಕಂಡಿದೆ. ಮುಖ್ಯವಾಗಿ ಈಶಾನ್ಯ ರಾಜ್ಯಗಳಲ್ಲಿ ಬೆಳೆಯುವ ನಿಂಬೆಹಣ್ಣು, ಹಲಸು, ದ್ರಾಕ್ಷಿ ಮತ್ತಿತರ ಬೆಳೆಗಳನ್ನು ದೇಶದ ಇತರ ಭಾಗಗಳಿಗೆ ಮಾತ್ರವಲ್ಲದೇ, ಜರ್ಮನಿ, ಲಂಡನ್, ಸಿಂಗಾಪುರ ಮತ್ತು ಫಿಲಿಫೈನ್ಸ್ ನಂತಹ ರಾಷ್ಟ್ರಗಳಿಗೆ ಸಾಗಿಸಲಾಗುತ್ತಿದೆ ಎಂದು ಅವರು ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!