ರೋಡ್‌ ರೋಮಿಯೋ ಪ್ರೀತಿ ಹುಚ್ಚಾಟಕ್ಕೆ ಪ್ರಾಣ ಕಳೆದುಕೊಂಡ ಯುವತಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ನನ್ನನ್ನು ಪ್ರೀತಿಸು ಎಂದು ಪೀಡಿಸುತ್ತಿದ್ದ ಯುವಕನ ಕಿರುಕುಳದಿಂದ ಮನನೊಂದ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು ಜಿಲ್ಲೆಯ ಇಲವಾಲ ಪೊಲೀಸ್ ಠಾಣಾ ವ್ಯಾಪ್ತಿಯ ಗಣಗರಹುಂಡಿ ಗ್ರಾಮದಲ್ಲಿ ನಡೆದಿದೆ.

ಹರ್ಷಿತಾ(21) ಆತ್ಮಹತ್ಯೆಗೆ ಶರಣಾದ ಯುವತಿ. ಅದೇ ಗ್ರಾಮದಲ್ಲಿ ವಾಸವಿದ್ದ ಯುವಕ ಶಿವು (26) ಕಿರುಕುಳ ನೀಡುತ್ತಿದ್ದನು. ಇದರಿಂದ ಬೇಸತ್ತ ಯುವತಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಹರ್ಷಿತಾ ಪೋಷಕರು ಆರೋಪಿಸಿದ್ದಾರೆ

ಪಿಯುಸಿ ವಿದ್ಯಾಭ್ಯಾಸ ಮುಗಿಸಿದ್ದ ಹರ್ಷಿತಾ ಕಂಪ್ಯೂಟರ್ ತರಗತಿಗೆ ಹೋಗುತ್ತಿದ್ದಳು. ಆಕೆಯನ್ನು ಇಷ್ಟ ಪಟ್ಟಿದ್ದ ಶಿವು, ಹಿಂದೆ ಬಿದ್ದು ಪ್ರೀತಸುವಂತೆ ಕಿರುಕುಳ ನೀಡುತ್ತಿದ್ದನಂತೆ, ಶಿವು ಮನವಿಯನ್ನ ಹರ್ಷಿತಾ ನಿರಾಕರಿಸಿದ್ದಾಳೆ.

ಈ ನಡುವೆ ಹರ್ಷಿತಾ ಮನೆಯವರು ಮದುವೆಗೆ ಸಂಬಂಧ ನೋಡಿದ್ದರು. ಆಷಾಢ ನಂತರ ಮದುವೆ ದಿನಾಂಕ ಗೊತ್ತುಪಡಿಸಲು ನಿರ್ಧರಿಸಿದ್ದರು. ಈ ಮಾಹಿತಿ ಅರಿತ ಶಿವು ತನ್ನನ್ನ ಪ್ರೀತಿಸಿ ಮದುವೆ ಆಗುವಂತೆ ಇನ್ನಷ್ಟು ಕಿರುಕುಳ ನೀಡಲು ಆರಂಭಿಸಿದ್ದ. ಶಿವು ಕಿರುಕುಳಕ್ಕೆ ಬೇಸತ್ತ ಹರ್ಷಿತ ಹುಳುಗಳನ್ನು ಸ್ವಚ್ಛಗೊಳಿಸಲು ಇಟ್ಟಿದ್ದ ಮಾತ್ರೆಗಳನ್ನ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ.

ಕೂಡಲೇ ಹರ್ಷಿತಾಳನ್ನ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಹರ್ಷಿತಾ ಮೃತಪಟ್ಟಿದ್ದಾಳೆ. ಮಗಳ ಸಾವಿಗೆ ಶಿವು ಕಾರಣ ಎಂದು ಹರ್ಷಿತಾ ತಂದೆ ವೇಣುಗೋಪಾಲ್ ಇಲವಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಶಿವು ಬಂಧನಕ್ಕೆ ಇಲವಾಲ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!