ಹೊಸದಿಗಂತ ವರದಿ, ವಿಜಯಪುರ:
ಮುಸ್ಲಿಮರ 2ಎ ಮೀಸಲಾತಿ ತೆಗೆದು ಹಾಕಬೇಕು ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.
ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ಅಲ್ಪ ಸಂಖ್ಯಾತ ಹಾಗೂ 2ಎ ಎರಡೆರಡು ಮೀಸಲಾತಿ ಲಾಭ ಪಡೆಯುತ್ತಿದ್ದಾರೆ. 2ಎ ಮೀಸಲಾತಿಯಿಂದ ತೆಗೆದುಹಾಕಲು ತಯಾರಿ ನಡೆದಿದೆ. ಈ ನಿಟ್ಟಿನಲ್ಲಿ ಸರ್ಕಾರ ಗಂಭೀರ ಚಿಂತನೆ ಸರ್ಕಾರ ಮಟ್ಟದಲ್ಲಿ ನಡೆಯುತ್ತಿವೆ. ನಾವು ಕೂಡ ಪುನರ್ ಪರಿಶೀಲನೆಗೆ ಸಿಎಂ ಅವರಿಗೆ ಹೇಳಿದ್ದೇವೆ ಎಂದರು.
ಒಂದು ಸಮುದಾಯ ಎರಡು ಕಡೆಗಳಲ್ಲಿ ಲಾಭ ಪಡೆಯೋದನ್ನು ತಡೆಯಬೇಕು. ಅಲ್ಲದೇ, ದೇಶ ವಿರೋಧಿ ಚಟುವಟಿಕೆ ಮಾಡುತ್ತಾರೆ, ಎರಡು ಕಡೆ ಲಾಭ ಪಡೆಯುತ್ತಾರೆ. ಅಂತವರ ಎಲ್ಲ ಮೀಸಲಾತಿ ಸೌಲಭ್ಯ ರದ್ದು ಪಡೆಸಬೇಕು. ಆದಷ್ಟು ಬೇಗನೆ ಸರ್ಕಾರ ಕ್ರಮ ವಹಿಸಲಿದೆ ಎಂದರು.