ಹೊಸದಿಗಂತ ಡಿಜಿಟಲ್ ಡೆಸ್ಕ್:
ತುಂಗಭದ್ರಾ ನದಿ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾದ ನಂತರ ತುಂಗಭದ್ರಾ ಜಲಾಶಯದಲ್ಲಿ ಒಳಹರಿವು ಭಾರೀ ಪ್ರಮಾಣದಲ್ಲಿ ಹೆಚ್ಚಳವಾಗಿದ್ದು, ಪರಿಣಾಮ 3.20 ಲಕ್ಷ ಕ್ಯೂಸೆಕ್ ನೀರನ್ನು ಜಲಾಶಯದಿಂದ ಬಿಡುಗಡೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಲೆನಾಡು ಪ್ರದೇಶ ಸೇರಿದಂತೆ ತುಂಗಭದ್ರಾ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿದೆ. ಮಳೆ ಪ್ರಮಾಣ ಹೆಚ್ಚಾದ ಹಿನ್ನೆಲೆಯಲ್ಲಿ ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಕೂಡ ಗಣನೀಯವಾಗಿ ಹೆಚ್ಚಾಗಿದೆ.
ಈ ವರ್ಷದ ಮಳೆಗಾಲದಲ್ಲಿ ಮೂರು ಬಾರಿ ಕಂಪ್ಲಿ ಮತ್ತು ಗಂಗಾವತಿ ಸೇತುವೆ, ಪೂರ್ಣದರದಾಸ ಮಂಟಪ, ಚಕ್ರತೀರ್ಥ, ರಾಮ ಲಕ್ಷ್ಮಣ ದೇವಾಲಯ, ಹಂಪಿಯ ಕೆಲವು ಸ್ಮಾರಕಗಳು ಸೇರಿ ಏಳು ಪ್ರಸಿದ್ಧ ಸ್ಮಾರಕಗಳು ಮುಳುಗಡೆಯಾಗಿವೆ.
ತಜ್ಞರ ಸಮಿತಿಯು ಅಣೆಕಟ್ಟಿನಲ್ಲಿ 80 ಟಿಎಂಸಿಗಿಂತ ಹೆಚ್ಚು ನೀರು ಸಂಗ್ರಹಿಸಬಾರದು ಎಂದು ಸೂಚಿಸಿದ್ದು, ಅಣೆಕಟ್ಟಿನ ಸುರಕ್ಷತೆಯನ್ನು ಕಾಪಾಡಿಕೊಳ್ಳುವ ಸಲುವಾಗಿ ನದಿಗೆ ಹೆಚ್ಚಿನ ನೀರನ್ನು ಬಿಡುಗಡೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ತುಂಗಭದ್ರಾ ಅಣೆಕಟ್ಟು ಪ್ರಾಧಿಕಾರದ ಹಿರಿಯ ಅಧಿಕಾರಿಯೊಬ್ಬರು ಮಾತನಾಡಿ, 21 ಕ್ರೆಸ್ಟ್ ಗೇಟ್ಗಳಿಂದ 1.60 ಲಕ್ಷ ಕ್ಯೂಸೆಕ್ ನೀರನ್ನು ನದಿಗೆ ಬಿಡುಗಡೆ ಮಾಡಲಾಗಿದೆ ಎಂದು ಹೇಳಿದ್ದಾರೆ.