ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಮರನಾಥ ಯಾತ್ರೆ ತೆರಳಿದ್ದ ಕರ್ನಾಟಕದ 300 ಜನರು ಸಂಕಷ್ಟಕ್ಕೆ ಸಿಲುಕಿದ್ದು, ರಕ್ಷಣಾ ಕಾರ್ಯ ಮುಂದುವರೆದಿದೆ ಎಂದು ಸಚಿವ ಎಚ್. ಕೆ ಪಾಟೀಲ್ ತಿಳಿಸಿದರು.
ಗದಗನಲ್ಲಿ ಮಾತನಾಡಿದ ಅವರು, ಯಾತ್ರಾರ್ಥಿಗಳು ಹಾಗೂ ಅವರ ಕುಟುಂಬಸ್ಥರು ಯಾವುದೇ ರೀತಿಯಾದ ಗೊಂದಲಕ್ಕೆ ಒಳಗಾಗುವ ಅಗತ್ಯವಿಲ್ಲ.ಯಾತ್ರಾರ್ಥಿಗಳಿಗೆ ಎಲ್ಲ ರೀತಿಯ ಸೌಲಭ್ಯ ಒದಗಿಸಲಾಗುತ್ತದೆ ಎಂದರು.
ಈಗಾಗಲೇ ಚಿಕ್ಕಮಂಗಳೂರಿನ 6 ಜನರು ಅಪಾಯದಿಂದ ರಕ್ಷಣೆ ಮಾಡಲಾಗಿದ್ದು,ಉಳಿದ ಎಲ್ಲ ಕನ್ನಡಿಗರ ರಕ್ಷಣೆಗೆ ಸೂಕ್ತವಾದ ಕ್ರಮ ಕೈಗೊಳ್ಳಲಾಗಿದೆ. ಯಾತ್ರಾರ್ಥಿಗಳಿಗೆ ಆಹಾರ ನೀರು ಸೇರಿದಂತೆ ಎಲ್ಲ ರೀತಿಯ ವ್ಯವಸ್ಥೆ ಮಾಡಲಾಗಿದೆ ಎಂದು ಅವರು ತಿಳಿಸಿದರು.