ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಜೆಪಿ ಆಡಳಿತದಲ್ಲಿ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯಲ್ಲಿ ಮೂರು ಸಾವಿರ ಕೋಟಿ ರೂಪಾಯಿ ಅಕ್ರಮ ನಡೆದಿರುವ ಆರೋಪ ಎದುರಾಗಿದ್ದು, ಸಿಎಂ ಸಿದ್ದರಾಮಯ್ಯ ಈ ಬಗೆಗಿನ ತನಿಖೆಗೆ ಆದೇಶಿಸಿದ್ದಾರೆ.
ಅನುದಾನದಲ್ಲಿ ವ್ಯಾಪಕ ಅಕ್ರಮದ ಬಗ್ಗೆ ದೂರು ಬಂದಿದೆ, ಹಾಗಾಗಿ ತನಿಖೆ ನಡೆಸಿ ಎಂದು ಸಚಿವ ಪ್ರಿಯಾಂಕ್ ಖರ್ಗೆ ಮನವಿ ಮಾಡಿದ್ದರು. ಸಿಎಂ ಸಿದ್ದರಾಮಯ್ಯ ತಕ್ಷಣವೇ ತನಿಖೆಗೆ ಆದೇಶ ಹೊರಡಿಸಿದ್ದಾರೆ.
ನಿಯಮಬಾಹಿರವಾಗಿ ಅನುದಾನ ಎಲ್ಲೆಲ್ಲಿ ಹೋಗಿದೆ? ಯಾವ ವಿಭಾಗದಲ್ಲಿ ಅಕ್ರಮ ನಡೆದಿದೆ? ಈ ಬಗ್ಗೆ ಸಂಪೂರ್ಣ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಆದೇಶದಲ್ಲಿ ತಿಳಿಸಿದ್ದಾರೆ.