ಹೊಸದಿಗಂತ ಡಿಜಿಟಲ್ ಡೆಸ್ಕ್ :
ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ರಾಜ್ಯ ಬಜೆಟ್ ಅನ್ನು ಮಂಡಿಸುತ್ತಿದ್ದು, ಮೈಸೂರು ವಿಮಾನ ನಿಲ್ದಾಣ ಉನ್ನತೀಕರಣಕ್ಕೆ 320 ಕೋಟಿ ರೂಪಾಯಿಗಳನ್ನು ಘೋಷಿಸಿದ್ದಾರೆ.
ಬಳ್ಳಾರಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಈಗಾಗಲೇ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಹೊಸ ಟೆಂಡರ್ ಪ್ರಕ್ರಿಯೆಯನ್ನು ಪ್ರಾರಂಭಗೊಳಿಸಿ ಸ್ಪರ್ಧಾತ್ಮಕ ಬಿಡ್ ಪಕ್ರಿಯೆ ಮೂಲಕ ಪಿಪಿಪಿ ಮಾದರಿಯಲ್ಲಿ ವಿಮಾನ ನಿಲ್ದಾಣವನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಹೇಳಿದ್ದಾರೆ.
ಮೈಸೂರು ವಿಮಾನ ನಿಲ್ದಾಣವನ್ನು ಉನ್ನತೀಕರಿಸಲು ಭೂ ಸ್ವಾಧೀನಕ್ಕಾಗಿ ಕ್ರಮ ವಹಿಸಲಾಗಿದ್ದು, ಇದಕ್ಕಾಗಿ 320 ಕೋಟಿ ರೂ. ಗಳಷ್ಟು ಹಂಚಿಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.