ಮೂರನೇ ದಿನಕ್ಕೆ ಕಾಲಿಟ್ಟ ಕಬ್ಬು ಬೆಳೆಗಾರರ ಹೋರಾಟ: ಬೇಡಿಕೆ ಈಡೇರಿಸುವಂತೆ ಪಟ್ಟು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಕಬ್ಬಿಗೆ ಸೂಕ್ತ ಬೆಲೆ ಆಗ್ರಹಿಸಿ ಬಾಗಲಕೋಟೆಯಲ್ಲಿ ರೈತರು ಕೈಗೊಂಡಿರುವ ಪ್ರತಿಭಟನೆ ಮೂರನೇ ದಿನಕ್ಕೆ ಕಾಲಿಟ್ಟಿದೆ. ಕಬ್ಬು ಬೆಳೆ ಪ್ರತಿ ಟನ್‌ಗೆ 2,900 ರೂಪಾಯಿ ದರ ನಿಗದಿ ಮಾಡುವಂತೆ ಒತ್ತಾಯಿಸಿ ನಡೆಯುತ್ತಿರುವ ಪ್ರತಿಭಟನೆ ಇಂದು ಸಹ ತೀವ್ರ ಸ್ವರೂಪ ಪಡೆದುಕೊಂಡಿದೆ.

ಹೆದ್ದಾರಿ ಬಂದ್‌ ಮಾಡಿ, ಹಳ್ಳಿ ರಸ್ತೆಗಳಲ್ಲೂ ಕೂಡ ಮುಳ್ಳು ತಂತಿ ಬೇಲಿ ಹಾಕಿ ಪ್ರತಿಭಟನೆ ನಡೆಸಿದ್ದಾರೆ. ರೈತರ ಪ್ರತಿಭಟನೆ ಹಿನ್ನೆಲೆ ನರಗದಾದ್ಯಂತ 144ಸೆಕ್ಷನ್‌ ಜಾರಿ ಮಾಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಹೆಚ್ಚುವರಿ ಪೊಲೀಸ್‌ ಭದ್ರತೆ ನೀಯೋಜಿಸಲಾಗಿದೆ. ರೈತರೊಂದಿಗೆ ಸಚಿವರು ನಡೆಸಿದ ಸಂಧಾನ ಸಭೆ ವಿಫಲವಾದ ಬಳಿಕ ಶುರುವಾದ ಹೋರಾಟ ಮೂರು ದಿನಗಳಿಂದ ಮುಂದುವರಿದಿದೆ.

ತಾವು ಬೇಡಿಕೆಯಟ್ಟಿರುವ 2,900ರೂ ಪ್ರತಿ ಟನ್‌ಗೆ ಬೆಲೆ ನಿಗದಿ ಮಾಡದಿದ್ದಲ್ಲಿ ಇಂದು ಬರೀ ಮುಧೋಳ ಬಂದ್‌ ಆಗಿದೆ. ಇನ್ನು ಮುಂದೆ ಮತ್ತಷ್ಟು ಹೋರಾಟದ ಬಿಸಿ ನಿಮಗೆ ತಟ್ಟಲಿದೆ ಎಂದು ಸರ್ಕಾರಕ್ಕೆ ರೈತರು ಎಚ್ಚರಿಕೆ ನೀಡಿದ್ದಾರೆ. ಕಾರ್ಖಾನೆ ಬೆಂಬಲಕ್ಕೆ ನಿಲ್ಲುವ ಬದಲು ಸರ್ಕಾರ ರೈತರ ಬೆಂಬಲವಾಗಿ ನಿಲ್ಲಬೇಕು ಎಂದು ಮನವಿ ಮಾಡಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!