Wednesday, January 14, 2026
Wednesday, January 14, 2026
spot_img

ಬಂಡೆಗೆ ಅಳವಡಿಸಲಾಗಿದ್ದ ಸ್ಫೋಟಕ ಸ್ಫೋಟಿಸಿ 4 ಚಿರತೆಗಳು ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬಂಡೆಗೆ ಅಳವಡಿಸಲಾಗಿದ್ದ ಸ್ಫೋಟಕ ಸ್ಫೋಟಿಸಿ 4 ಚಿರತೆಗಳು ಸಾವನ್ನಪ್ಪಿರುವ ಭೀಕರ ಘಟನೆ ಬೆಂಗಳೂರು ಹೊರವಲಯದಲ್ಲಿ ನಡೆದಿದೆ.

ಬೆಂಗಳೂರಿನ ಯಶವಂತಪುರ ಸಮೀಪ ಅಕ್ರಮ ಕಲ್ಲು ಗಣಿಗಾರಿಕೆ ವೇಳೆ ನಡೆದ ಬ್ಲಾಸ್ಟ್‌ಗೆ ಗರ್ಭಿಣಿ ಚಿರತೆ ಮತ್ತು ಅದರ ಹೊಟ್ಟೆಯಲ್ಲಿದ್ದ ಮೂರು ಮರಿಗಳು ಮೃತಪಟ್ಟಿವೆ. ಬಸವನತಾರ ಅರಣ್ಯ ಪ್ರದೇಶದಲ್ಲಿ ನಡೆದ ದುರಂತ ಘಟನೆಯಲ್ಲಿ ಗರ್ಭಿಣಿ ಚಿರತೆ ಮತ್ತು ಅದರ ಮೂರು ಹುಟ್ಟಲಿರುವ ಮರಿಗಳು ಕಲ್ಲು ಗಣಿಗಾರಿಕೆ ಚಟುವಟಿಕೆಗಳಿಂದಾಗಿ ಸತ್ತಿವೆ ಎಂದು ಹೇಳಲಾಗಿದೆ.

ಮೂಲಗಳ ಪ್ರಕಾರ ಡಿಸೆಂಬರ್ 27, 2025 ರಂದು ದಿನನಿತ್ಯದ ಗಸ್ತು ತಿರುಗುತ್ತಿದ್ದಾಗ, ಕಗ್ಗಲೀಪುರ ಶ್ರೇಣಿಯ ಅರಣ್ಯ ಅಧಿಕಾರಿಗಳು ಸರ್ವೆ ಸಂಖ್ಯೆ 51 ರಲ್ಲಿ 3-4 ವರ್ಷ ವಯಸ್ಸಿನ ಹೆಣ್ಣು ಚಿರತೆಯ ಮೃತದೇಹವನ್ನು ಪತ್ತೆ ಮಾಡಿದರು. ನಂತರ ಮರಣೋತ್ತರ ಪರೀಕ್ಷೆಯಲ್ಲಿ ಚಿರತೆ ತನ್ನ ಗರ್ಭದಲ್ಲಿ ಮೂರು ಮರಿಗಳನ್ನು ಹೊಂದಿತ್ತು ಎಂದು ತಿಳಿದುಬಂದಿದೆ.

ಪ್ರಾಥಮಿಕ ಅಂದಾಜಿನ ಪ್ರಕಾರ, ಬೃಹತ್ ಕಲ್ಲಿನ ಸ್ಫೋಟದ ಪರಿಣಾಮ ಚಿರತೆ ಸಾವನ್ನಪ್ಪಿದೆ. ಹತ್ತಿರದ ಕ್ವಾರಿಯಲ್ಲಿ ಭಾರೀ ಸ್ಫೋಟದಿಂದ ಉರುಳಿದ ಬಂಡೆಯೊಂದು ಚಿರತೆಗೆ ಡಿಕ್ಕಿ ಹೊಡೆದಿದೆ. ಈ ಘಟನೆ ನಡೆದು 2 ಮೂರು ದಿನಗಳ ಬಳಿಕ ಚಿರತೆ ಮೃತದೇಹ ಪತ್ತೆಯಾಗಿದೆ ಎಂದು ಹೇಳಲಾಗಿದೆ.

Most Read

error: Content is protected !!