ದೇವಸ್ಥಾನದ ಹುಂಡಿ ಕಳ್ಳತನ ಮಾಡಿದ ಆರೋಪಿಗಳಿಗೆ 4 ವರ್ಷ ಜೈಲು

ದಿಗಂತ ವರದಿ ಶಿವಮೊಗ್ಗ :

ಮನೆಗಳ್ಳತನ ಹಾಗೂ ದೇವಸ್ಥಾನದ ಹುಂಡಿ ಕಳ್ಳತನ ಮಾಡಿದ ನಾಲ್ವರು ಆರೋಪಿಗಳಿಗೆ ಭದ್ರಾವತಿ ನ್ಯಾಯಾಲಯ 4 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 10 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ.
ಬೆಂಗಳೂರಿನ ರಘು ಯಾನೆ ಚಿನ್ನು , ರಘು ಯಾನೆ ಬೆಂಗಳೂರು ರಘು, ಆನಂದ ಯಾನೆ ದೊಡ್ಡ ನಂದ , ಆನಂದ ಯಾನೆ ಚಿನ್ನ ಶಿಕ್ಷೆಗೊಳಗಾಗಿರುವ ಆರೋಪಿಗಳಾಗಿದ್ದಾರೆ.

ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಶಂಕರಘಟ್ಟ ಗ್ರಾಮದ ವಾಸಿಯೊಬ್ಬರ ಮನೆಯ ಬಾಗಿಲು ಮುರಿದು ಕಳ್ಳತನಕ್ಕೆ ಪ್ರಯತ್ನಿಸಿದ್ದರು. 2.906.2018 ರಂದು ರಾತ್ರಿ ವೀರಾಪುರ ಗ್ರಾಮದಲ್ಲಿನ ಗುಡಿಬಂಡೆ ಸಿದ್ದೇಶ್ವರ ಸ್ವಾಮಿ ದೇವಸ್ಥಾನದ ಹುಂಡಿಯ ಹಣ ಮತ್ತು ಆಭರಣಗಳನ್ನು ಕಳ್ಳತನ ಕಳ್ಳತನ ಮಾಡಿದ್ದರು.

ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಪಿಎಸ್‌ಐ ಮಂಜುನಾಥ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶರಾದ ಮಿಲನಾ ಅವರು ಈ ತೀರ್ಪು ನೀಡಿದ್ದು, ದಂಡ ಕಟ್ಟಲಿ ವಿಫಲರಾದರೆ 6 ತಿಂಗಳು ಕಾರಾಗೃಹ ಶಿಕ್ಷೆ ವಿಧಿಸುವಂತೆ ಆದೇಶದಲ್ಲಿ ತಿಳಿಸಲಾಗಿದೆ. ಸರ್ಕಾರದ ಪರವಾಗಿ ಎಪಿಪಿ ಮಂಜುನಾಥ ವಾದ ಮಂಡಿಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!