ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಮಧ್ಯಪ್ರದೇಶದ ಅಗರ್ ಜಿಲ್ಲೆಯ ದೇವಸ್ಥಾನದಲ್ಲಿ ಪ್ರಸಾದ ಸೇವಿಸಿ 40 ಮಂದಿ ಅಸ್ವಸ್ಥರಾಗಿದ್ದಾರೆಂದು ಪೊಲೀಸರು ತಿಳಿಸಿದ್ದು, ಈ ಸಂಬಂಧ ಸ್ಥಳೀಯ ಆರೋಗ್ಯ ಇಲಾಖೆಯ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದೆ.
ಶ್ರಾವಣ ಮಾಸದ ಪ್ರಯುಕ್ತ ಇಲ್ಲಿನ ದೇವಸ್ಥಾನದಲ್ಲಿ ದೇವರ ದರುಶನ ಪಡೆಯಲು ಅಪಾರ ಭಕ್ತಾದಿಗಳು ಬಂದಿದ್ದು, 200ಕ್ಕೂ ಹೆಚ್ಚು ಮಂದಿ ದೇವರ ಮೆರವಣಿಗೆಯಲ್ಲಿ ಪಾಲ್ಗೊಂಡ ಬಳಿಕ ಪ್ರಸಾದ ಸೇವಿಸಿದ್ದಾರೆ.
ಪ್ರಸಾದ ಸೇವಿಸಿದ ಬಳಿಕ ವಾಂತಿ, ಹೊಟ್ಟೆನೋವು ಕಾಣಿಸಿಕೊಂಡಿದ್ದು, ಅಸ್ವಸ್ಥರಾದವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕೆಲವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಸ್ವಸ್ಥಗೊಂಡವವರು ಈಗ ಚೇತರಿಸಿಕೊಳ್ಳುತ್ತಿದ್ದಾರೆಂದು ಅಧಿಕಾರಿಗಳು ತಿಳಿಸಿದ್ದಾರೆ.