ಶಿರಾಡಿ ಘಾಟಿಯಲ್ಲಿ ಮತ್ತೆ ಭೂಕುಸಿತ, ಸಂಚಾರ ಬಂದ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಶಿರಾಡಿ ಘಾಟಿಯಲ್ಲಿ ಮತ್ತೆ ಭೂಕುಸಿತ ಸಂಭವಿಸಿದೆ.

ಸಕಲೇಶಪುರ ದೊಡ್ಡ ತೊಬ್ಲು ಬಳಿ ಭಾರೀ ಭೂಕುಸಿತ ಸಂಭವಿಸಿದ್ದು, ವಾಹನಗಳು ಸಿಕ್ಕಿಹಾಕಿಕೊಂಡಿವೆ. ಸದ್ಯಕ್ಕೆ ಈ ಹೆದ್ದಾರಿಯಲ್ಲಿ ಸಂಚಾರ ಸ್ಥಗಿತವಾಗಿದೆ.

ಮಣ್ಣಿನಲ್ಲಿ ಅರ್ಧ ಮುಳುಗಿರುವ ವಾಹನಗಳನ್ನು ತೆರವು ಮಾಡುವ ಪ್ರಯತ್ನ ಜಾರಿಯಲ್ಲಿದೆ. ಯಾವುದೇ ರೀತಿಯ ಪ್ರಾಣಹಾನಿ ಆಗಿಲ್ಲ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!