ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ 43 ಪ್ರಕರಣ ವಾಪಸ್: ರಾಜ್ಯ ಸಚಿವ ಸಂಪುಟ ನಿರ್ಧಾರ

ಹೊಸದಿಗಂತ ಡಿಜಿಟಲ್ ಡೆಸ್ಕ್;

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನಸೌಧದಲ್ಲಿ ಸಂಪುಟ ಸಭೆ ಮಾಡಲಾಗಿದ್ದು, ಈ ವೇಳೆ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ 43 ಪ್ರಕರಣಗಳನ್ನು ಪ್ರಾಸಿಕ್ಯೂಷನ್​ನಿಂದ ಕೈಬಿಡಲು ಸಂಪುಟ ತೀರ್ಮಾನ ಮಾಡಿದೆ ಎಂದು ಸಚಿವ ಹೆಚ್.ಕೆ.ಪಾಟೀಲ್ ಹೇಳಿದ್ದಾರೆ.

ಸಭೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಂಪುಟ ಸಭೆಯಲ್ಲಿ 16 ವಿಷಯಗಳ ಬಗ್ಗೆ ಚರ್ಚೆ ನಡೆಸಿ ನಿರ್ಧರಿಸಿದ್ದೇವೆ. ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯವರು ಪ್ರಸ್ತಾಪಿಸಿದ್ದ ಸೋಮೇಶ್ವರ ಶುಗರ್ಸ್ ಬದಲು ಮೃಣಾಲ್ ಶುಗರ್ಸ್ ಹೊಸ ಕಾರ್ಖಾನೆಗೆ ಧಾರವಾಡದ 19 ಗ್ರಾಮಗಳ ಕಬ್ಬು ಮೀಸಲು ಕ್ಷೇತ್ರ ಮಾಡಲು ನಿರ್ಣಯಿಸಲಾಗಿದೆ ಎಂದರು.

ಇನ್ನು ಸಿಎಂ ಸಿದ್ದರಾಮಯ್ಯ ನೇತ್ರತ್ವದಲ್ಲಿ ಇಂದು ನಡೆದ ಕ್ಯಾಬಿನೆಟ್ ಮೀಟಿಂಗ್​ನಲ್ಲಿ ಹಲವು ಮಹತ್ವದ ವಿಚಾರಗಳು ಚರ್ಚೆ ಮಾಡಲಾಗಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೋವಿಡ್​ ಹಗರಣ ಆರೋಪ ವಿಚಾರವಾಗಿ ಕ್ಯಾಬಿನೆಟ್‌ ಸಬ್ ಕಮಿಟಿ ಜೊತೆ ಎಸ್‌ಐಟಿ ರಚನೆಗೆ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ತೆಗೆದುಕೊಳ್ಳಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!