ಬೆಳಗಾವಿಯ ಜಾತ್ರೆಯಲ್ಲಿ ಪ್ರಸಾದ ಸೇವಿಸಿ 46 ಮಂದಿ ಅಸ್ವಸ್ಥ: ಐವರ ಸ್ಥಿತಿ ಗಂಭೀರ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಜಾತ್ರೆಯಲ್ಲಿ ಪ್ರಸಾದ ಸೇವಿಸಿ 46 ಜನ ಅಸ್ವಸ್ಥರಾಗಿದ್ದು, ಐವರ ಸ್ಥಿತಿ ಗಂಭೀರವಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದಲ್ಲಿ ನಡೆದಿದೆ.

ಪ್ರಸಾದದಲ್ಲಿ ಕಲುಷಿತ ಪದಾರ್ಥ ಸೇರಿದ್ದರಿಂದ ಹೀಗಾಗಿರಬಹುದು ಎನ್ನುವ ಅನುಮಾನ ವ್ಯಕ್ತವಾಗಿದೆ. ಭೀರೇಶ್ವರ ಮತ್ತು ಕರೆಮ್ಮ ಜಾತ್ರೆಯಲ್ಲಿ ಅನ್ನ ಪ್ರಸಾದ ಮತ್ತು‌ ಮಾವಿನ ಹಣ್ಣಿನ ಸೀಕರಣೆಯನ್ನು ಗ್ರಾಮಸ್ಥರು ಸೇವಿಸಿದ್ದರು.

ಪ್ರಸಾದ ಸೇವಿಸಿದ ಜನರಲ್ಲಿ ಏಕಾಏಕಿ ವಾಂತಿ-ಭೇದಿ ಕಾಣಿಸಿಕೊಂಡಿದೆ. ಮಾಹಿತಿ ಸಿಗುತ್ತಿದ್ದಂತೆ ಸ್ಥಳೀಯ ಶಾಸಕ ವಿಶ್ವಾಸ್ ವೈದ್ಯ ಆಸ್ಪತ್ರೆಗೆ ದೌಡಾಯಿಸಿ ಅಗತ್ಯ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚನೆ ನೀಡಿದ್ದಾರೆ. ಅಸ್ವಸ್ಥಗೊಂಡವರನ್ನು ಕೂಡಲೇ ಸ್ಥಳೀಯ ಸವದತ್ತಿ ಸಾರ್ವಜನಿಕ ಆಸ್ಪತ್ರೆ ಹಾಗೂ ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಐವರ ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!